ಬನ್ನೂರು ನಸುಕಿನ ಜಾವ ಧರೆ ಕುಸಿದು ಮನೆಗೆ ಹಾನಿ- ಸ್ಥಳಕ್ಕೆ ನಗರಸಭೆ ಸದಸ್ಯರು ಸಹಿತ ಪೌರಾಯುಕ್ತರು ಭೇಟಿ

0

ಪುತ್ತೂರು: ತಾಲೂಕಿನೆಲ್ಲೆಡೆ ಭಾರಿ ಮಳೆಗೆ ಅನೇಕ ಕಡೆ ಧರೆ ಕುಸಿದ ಘಟನೆ ನಡೆಯುತ್ತಿದ್ದು ಪುತ್ತೂರು ಬನ್ನೂರಿನ ಜೈನರಗುರಿ ಸಮೀಪ ಮಜೀದ್ ಎಂಬರ ಮನೆ ಮೇಲೆ ಧರೆ ಕುಸಿದ ಪರಿಣಾಮ ಮನೆ ಹಾನಿಗೊಂಡ ಮತ್ತು ನಿದ್ದೆಯಲ್ಲಿದ್ದ ಮಕ್ಕಳು ಮಣ್ಣಿನಡಿಯಲ್ಲಿ ಸಿಲುಕಿದ ಘಟನೆ ಜೂ.27 ರ ನಸುಕಿನ ಜಾವ ನಡೆದಿದೆ.ಘಟನಾ ಸ್ಥಳಕ್ಕೆ ನಗರಸಭಾ ಸದಸ್ಯರಾದ ಪಾತಿಮಾತ್ ಜೋರಾ, ಪಿ ಜಿ ಜಗನ್ನಿವಾಸ ರಾವ್, ಪೌರಾಯುಕ್ತ ಮಧು ಎಸ್ ಮನೋಹರ್ , ಕಂದಾಯ ನಿರೀಕ್ಷರು ಭೇಟಿ ನೀಡಿದರು.

 

ಈ ಸಂದರ್ಭ ಸ್ಥಳಿಯ ನಿವಾಸಿ ಗಣೇಶ್ ಆಚಾರ್ಯ ಸಹಿತ ಹಲವಾರು ಮಂದಿ ಮಣ್ಣು ತೆರವು ಕಾರ್ಯದಲ್ಲಿ ಸಹಕರಿಸಿದರು.

LEAVE A REPLY

Please enter your comment!
Please enter your name here