ಪತ್ರಕರ್ತರ ಬೇಡಿಕೆಗಳನ್ನು ಈಡೇರಿಸುವಂತೆ ಸಿಎಂಗೆ ಮನವಿ ಮಾಡಿದ  ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ 

0

ಬೆಂಗಳೂರು: ಪತ್ರಕರ್ತರಿಗೆ ಉಚಿತ ಆರೋಗ್ಯ, ಬಸ್ ಪಾಸ್ ಮತ್ತಿತರ ಬೇಡಿಕೆಗಳ ಬಗ್ಗೆ ವಿಧಾನಸೌಧದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ನೇತೃತ್ವದ ನಿಯೋಗ ಮನವಿ ಸಲ್ಲಿಸಿದೆ.

ಅರ್ಜಿ ಸಲ್ಲಿಸಿದ್ದರೂ, ಅರ್ಹ ಪತ್ರಕರ್ತರ ಮಾಸಾಶನ ಮಂಜೂರು ಮಾಡಿಲ್ಲ. ಮೂರಾಲ್ಕು ತಿಂಗಳಾದರೂ ಪತ್ರಕರ್ತರ ಮಾಸಾಶನ ಇನ್ನೂ ಬಿಡುಗಡೆ ಆಗಿಲ್ಲ ಎಂಬಿತ್ಯಾದಿ ಬೇಡಿಕೆಗಳ ಬಗ್ಗೆ ಸಿಎಂ ಗಮನಕ್ಕೆ ತರಲಾಗಿದೆ. ಹಿಂದುಳಿದ ವರ್ಗ, ಬ್ರಾಹ್ಮಣ ಮತ್ತು ದಲಿತ ವರ್ಗಗಳಿಗೆ ಬಿಡುಗಡೆ ಮಾಡಬೇಕಾದ ಜಾಹೀರಾತುಗಳ ಬಗ್ಗೆ ಸಿಎಂ ಗಮನ ಸೆಳೆಯಲಾಯಿತು.

ಮಾಧ್ಯಮ ಅಕಾಡೆಮಿ ಮತ್ತು ಪ್ರೆಸ್ ಕ್ಲಬ್ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಜಂಟಿಯಾಗಿ ಜು.1ರಂದು ಬೆಂಗಳೂರು ಪ್ರೆಸ್ ಕ್ಲಬ್ ಆವರಣದಲ್ಲಿ ನಡೆಸಲಿರುವ ಪತ್ರಿಕಾ ದಿನಾಚರಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಹ್ವಾನಿಸಲಾಯಿತು.

ಈ ಸಂದರ್ಭದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ಸೋಮಶೇಖರ್ ಕೆರಗೋಡು ,ರಾಜ್ಯ ಸಮಿತಿ ಸದಸ್ಯರಾದ ಎನ್.ರವಿಕುಮಾರ್, ರಾಜ್ಯ ಎಸ್ಸಿ, ಎಸ್ಟಿ ಪತ್ರಿಕಾ ಸಂಪಾದಕರ ಸಂಘದ ಅಧ್ಯಕ್ಷ ಚೆಲುವರಾಜ್ ಮೊದಲಾದವರಿದ್ದರು.

LEAVE A REPLY

Please enter your comment!
Please enter your name here