ಸಜಂಕಾಡಿ ರಸ್ತೆಗೆ ಮರ ಬಿದ್ದು ವಾಹನ ಸಂಚಾರಕ್ಕೆ ತಡೆ

0

ಬಡಗನ್ನೂರು: ಈಶ್ವರಮಂಗಲ – ಸುಳ್ಯಪದವು ಲೋಕೋಪಯೋಗಿ ರಸ್ತೆ  ಸಜಂಕಾಡಿ ಎಂಬಲ್ಲಿ ರಸ್ತೆ  ಬದಿಯಲ್ಲಿದ್ದ ಬಾರಿ ಗಾತ್ರದ ಮರವೊಂದು ರಸ್ತೆಗೆ ಬಿದ್ದು ಸ್ವಲ್ಪ ಸಮಯ ವಾಹನ ಸಂಚಾರಕ್ಕೆ ಅಡ್ಡಿಯಾದ ಘಟನೆ ನಡೆಯಿತು.ಘಟನೆ ನಡೆದ ಬಳಿಕ ಸಾರ್ವಜನಿಕರು ಸ್ಪಂಧಿಸಿ ಕೂಡಲೇ ಮರ ತೆರವುಗೊಳಿಸುವ ಕಾರ್ಯ ಮಾಡಿದರು. 

ಬಡಗನ್ನೂರು ಗ್ರಾ.ಪಂ ಸಾಮಾನ್ಯ ಸಭೆಯಲ್ಲಿ ರಸ್ತೆ ಬದಿ ಅಪಾಯಕಾರಿ ಮರ ತೆರವು ಮಾಡುವ ಬಗ್ಗೆ ಅರಣ್ಯ ಇಲಾಖೆ ಪತ್ರ ಬರೆದಿದ್ದರು ಆದರೆ ಅರಣ್ಯ ಇಲಾಖೆ ಇನ್ನೂ ಏಚ್ಚೆತ್ತುಕೊಂಡಿಲ್ಲ. ಅರಣ್ಯ ಪ್ರದೇಶದಲ್ಲಿ ವಾಹನ ಸವಾರರು ಭಯದ ರೀತಿಯಲ್ಲಿ ಸಂಚಾರ ಮಾಡುವ ಪ್ರಸಂಗ ಬಂದಿದೆ. ಅವಘಡ ಸಂಭವಿಸುವ ಮುನ್ನ ಅಪಾಯಕಾರಿ ಮರಗಳನ್ನು ತೆರವು ಮಾಡುವಂತೆ ಸಾರ್ವಜನಿಕರು ಅಗ್ರಹಿಸಿದ್ದಾರೆ.

LEAVE A REPLY

Please enter your comment!
Please enter your name here