ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪಡೆದು ಭೂ ಸೇನೆಗೆ ಆಯ್ಕೆಯಾದ ಸುಳ್ಯದ ಸೃಜನ್ ಕೆ.ಆರ್- ನಾಳೆ(ಜೂ.29) ಸೇನೆಗೆ ಸೇರ್ಪಡೆ

0

ಪುತ್ತೂರು : ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರ , ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪಡೆದಿರುವ ಸುಳ್ಯ ನಿವಾಸಿ ಸೃಜನ್ ಕೆ. ಆರ್. ಭಾರತೀಯ ಭೂಸೇನೆಗೆ ಆಯ್ಕೆಗೊಂಡಿದ್ದಾರೆ.
ಸುಳ್ಯ ತಾಲೂಕಿನ ಮುರುಳ್ಯ ಗ್ರಾಮದ ಕೊಡ್ದೋಳು ನಿವಾಸಿ ರಾಮಕೃಷ್ಣ ರೈ ಮತ್ತು ಗೀತಾ ದಂಪತಿಯ ಪುತ್ರ ಸೃಜನ್ ಕೆ.ಆರ್. ಜೂ.29 ರಂದು ಕರ್ತವ್ಯಕ್ಕಾಗಿ ಅಸ್ಸಾಂಗೆ ತೆರಳಲಿದ್ದಾರೆ.


ಸೃಜನ್ ರವರು ಹೈಸ್ಕೂಲ್ ವಿದ್ಯಾಭ್ಯಾಸವನ್ನು ಎಣ್ಮೂರು ಪ್ರೌಢಶಾಲೆಯಲ್ಲಿ, ಪಿ.ಯು ಶಿಕ್ಷಣವನ್ನು ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಪೂರೈಸಿ ,ಆ ಬಳಿಕ ಸುಳ್ಯದ ವಿದ್ಯಾಮಾತಾ ಅಕಾಡೆಮಿ ತರಬೇತಿ ಕೇಂದ್ರದಲ್ಲಿ ಆರ್ಮಿ ಪರೀಕ್ಷಾ ತರಬೇತಿಯನ್ನು ಪಡೆದುಕೊಂಡಿದ್ದರು. ಇದೀಗ ಅವರು ಭೂ ಸೇನೆಗೆ ಆಯ್ಕೆಗೊಂಡಿರುವುದಕ್ಕೆ ಅಕಾಡೆಮಿ ಅಧ್ಯಕ್ಷ ಭಾಗ್ಯೇಶ್ ರೈ ಅವರ ಸಾಧನೆಯನ್ನು ಮೆಚ್ಚಿ , ಹರ್ಷ ವ್ಯಕ್ತಪಡಿಸಿ , ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here