ಪೆರ್ನೆ: ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಬ್ಯಾಗ್, ಪುಸ್ತಕ ವಿತರಣೆ

0

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ, ಪೆರ್ನೆ ವಲಯದ ಕಡೇ ಶಿವಾಲಯ ಗ್ರಾಮದ ಕೊರತಿಗುರಿಯ ಮಾಸಾಶನ ಫಲಾನುಭವಿ ಸಂಧ್ಯಾ ಕುಮಾರಿಯವರ ಪುತ್ರ ಪೂರ್ಣೇಶ್ ಸ.ಹಿ.ಪ್ರಾ.ಶಾಲೆ ಪೆರ್ಲಾಪುವಿನಲ್ಲಿ 7ನೇ ತರಗತಿ ವಿದ್ಯಾಭ್ಯಾಸ ಮಾಡುತ್ತಿದ್ದು, ಅಸಹಾಯಕ ಪರಿಸ್ಥಿತಿಯಲ್ಲಿರುವ ಇವರನ್ನು ಪೆರ್ನೆ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು ಗುರುತಿಸಿ ಬ್ಯಾಗ್, ಪುಸ್ತಕ ಹಾಗೂ ಕಲಿಕೋಪಕರಣಗಳನ್ನು ವಿತರಣೆ ಮಾಡಿದರು.


ಈ ಸಂದರ್ಭದಲ್ಲಿ ಮೇಲ್ವಿಚಾರಕರಾದ ಶಾರದಾ, ಗ್ರಾಮ ಪಂಚಾಯತ್ ಸದಸ್ಯರಾದ ನಳಿನಿ, ಪೆರ್ನೆ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾದ ನವೀನ್ ಕುಮಾರ್ ಪದಬರಿ, ಸೇವಾಪ್ರತಿನಿಧಿಗಳಾದ ಅಶ್ಮಿತಾ, ಜಲಜಾಕ್ಷಿ, ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಾದ ಸುರೇಶ್, ರಮೇಶ್ ನಾಯ್ಕ್, ಗೋಪಾಲ ಸಪಲ್ಯ, ಪುರುಷೋತ್ತಮ ಶೆಟ್ಟಿ, ಅಶೋಕ, ಒಕ್ಕೂಟದ ಪದಾಧಿಕಾರಿಗಳಾದ ಸುಶೀಲ ಹಾಗೂ ಯಶೋದಾರವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here