![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ಪುತ್ತೂರು: ಪುತ್ತೂರು ತಾಲೂಕಿನ ಪುತ್ತೂರು – ಪಾಣಾಜೆ ರಸ್ತೆಯ ದೇವಸ್ಯದಿಂದ ಚೆಲ್ಯಡ್ಕ ಮೂಲಕ ಸಂಪರ್ಕ ಕಲ್ಪಿಸುವ ಸೇತುವೆಯು ಕಳೆದ ಎರಡು ದಿನಗಳಿಂದ ಸುರಿವ ಭಾರೀ ಮಳೆ ನೀರಿನಿಂದಾಗಿ ಸಂಪೂರ್ಣವಾಗಿ ಮುಳುಗಡೆಯಾಗಿದ್ದು ಮುಂದಿನ ಆದೇಶದವರೆಗೆ ಈ ಸೇತುವೆಯಲ್ಲಿ ಘನ ವಾಹನ ಸಂಚಾರವನ್ನು ನಿರ್ಬಂಧಿಸಿ, ಸಂಚಾರ ಮಾರ್ಗವನ್ನು ಬದಲಾಯಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.
![](https://puttur.suddinews.com/wp-content/uploads/2024/06/WhatsApp-Image-2024-06-29-at-1.38.30-PM.jpeg)
ಪುತ್ತೂರು ದೇವಸ್ಯ ಕಡೆಯಿಂದ ಪಾಣಾಜೆ ಕಡೆಗೆ ಸಂಚರಿಸುವ ಘನ ವಾಹನಗಳು ಚೆಲ್ಯಡ್ಕದವರೆಗೆ ಸಂಚರಿಸಬಹುದು. ಪುತ್ತೂರು ಆರ್ಯಾಪು, ಸಂಪ್ಯ – ಸಂಟ್ಯಾರು – ಬೆಟ್ಟಂಪಾಡಿ ಮುಖ್ಯರಸ್ತೆಯ ಮೂಲಕ ಪಾಣಾಜೆ ಕಡೆಗೆ ಘನ ವಾಹನಗಳು ಸಂಚರಿಸುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.
![](https://puttur.suddinews.com/wp-content/uploads/2024/06/WhatsApp-Image-2024-06-29-at-1.32.55-PM.jpeg)
![](https://puttur.suddinews.com/wp-content/uploads/2024/06/WhatsApp-Image-2024-06-29-at-1.32.56-PM.jpeg)