ಚೆಲ್ಯಡ್ಕ ಸೇತುವೆಯಲ್ಲಿ ಘನ ವಾಹನ ಸಂಚಾರಕ್ಕೆ ನಿರ್ಬಂಧ – ಪರ್ಯಾಯ ಮಾರ್ಗ ಬಳಸುವಂತೆ ಸೂಚನೆ

0

ಪುತ್ತೂರು: ಪುತ್ತೂರು ತಾಲೂಕಿನ ಪುತ್ತೂರು – ಪಾಣಾಜೆ ರಸ್ತೆಯ ದೇವಸ್ಯದಿಂದ ಚೆಲ್ಯಡ್ಕ ಮೂಲಕ ಸಂಪರ್ಕ ಕಲ್ಪಿಸುವ ಸೇತುವೆಯು ಕಳೆದ ಎರಡು ದಿನಗಳಿಂದ ಸುರಿವ ಭಾರೀ ಮಳೆ ನೀರಿನಿಂದಾಗಿ ಸಂಪೂರ್ಣವಾಗಿ ಮುಳುಗಡೆಯಾಗಿದ್ದು ಮುಂದಿನ ಆದೇಶದವರೆಗೆ ಈ ಸೇತುವೆಯಲ್ಲಿ ಘನ ವಾಹನ ಸಂಚಾರವನ್ನು ನಿರ್ಬಂಧಿಸಿ, ಸಂಚಾರ ಮಾರ್ಗವನ್ನು ಬದಲಾಯಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಆದೇಶ ಹೊರಡಿಸಿದ್ದಾರೆ.

ಪುತ್ತೂರು ದೇವಸ್ಯ ಕಡೆಯಿಂದ ಪಾಣಾಜೆ ಕಡೆಗೆ ಸಂಚರಿಸುವ ಘನ ವಾಹನಗಳು ಚೆಲ್ಯಡ್ಕದವರೆಗೆ ಸಂಚರಿಸಬಹುದು. ಪುತ್ತೂರು ಆರ್ಯಾಪು, ಸಂಪ್ಯ – ಸಂಟ್ಯಾರು – ಬೆಟ್ಟಂಪಾಡಿ ಮುಖ್ಯರಸ್ತೆಯ ಮೂಲಕ ಪಾಣಾಜೆ ಕಡೆಗೆ ಘನ ವಾಹನಗಳು ಸಂಚರಿಸುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

LEAVE A REPLY

Please enter your comment!
Please enter your name here