![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ಪುತ್ತೂರು: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ 2024-29ನೇ ಅವಧಿಯ ಕಾರ್ಯಕಾರಿ ಸಮಿತಿಯ ಚುನಾವಣಾ ಪ್ರಕ್ರಿಯೆ ಶೀಘ್ರದಲ್ಲಿ ನಡೆಯಲಿದ್ದು ಈ ಸಂಬಂಧ ಪುತ್ತೂರು ತಾಲೂಕಿನ ವಿವಿಧ ಇಲಾಖೆಗಳ ಕರಡು ಮತದಾರರ ಪಟ್ಟಿಯನ್ನು ತಯಾರಿಸಲಾಗಿದ್ದು ಸದಸ್ಯರ ಗಮನಕ್ಕೆ ಸಂಘದ ಕಛೇರಿಯ ನೋಟೀಸ್ ಬೋರ್ಡಿನಲ್ಲಿ ಪ್ರಕಟಿಸಲಾಗಿದೆ. ಸಂಘದ ಸದಸ್ಯರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಂಡಿದೆಯೋ ಇಲ್ಲವೋ ಎಂಬುದನ್ನು ಪರಿಶೀಲಿಸಿ ಆಕ್ಷೇಪಣೆಗಳಿದ್ದಲ್ಲಿ ಜು.10 ರಂದು ಸಂಜೆ ಏಳು ಗಂಟೆಯೊಳಗೆ ಲಿಖಿತ ರೂಪದಲ್ಲಿ ಸಂಘದ ಕಛೇರಿಯಲ್ಲಿ ಸಲ್ಲಿಸುವಂತೆ ಕೋರಲಾಗಿದೆ. ಹೆಚ್ಚಿನ ಮಾಹಿತಿಗೆ ಸಂಘದ ಕಛೇರಿಯನ್ನು ಸಂಪರ್ಕಿಸತಕ್ಕದ್ದು ಎಂದು ಸಂಘದ ಅಧ್ಯಕ್ಷ ಶಿವಾನಂದ ಆಚಾರ್ಯರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.