ವಿಠಲ್ ಜೇಸಿಸ್ ಆಂಗ್ಲ ಮಾಧ್ಯಮ ಶಾಲೆಯ ಆಡಳಿತ ಮಂಡಳಿ ಅಧ್ಯಕ್ಷ ಎಲ್.ಎನ್. ಕೂಡೂರು ವಿಧಿವಶ

0

ವಿಟ್ಲ: ವಿಟ್ಲ ವಿಠಲ್ ಜೇಸಿಸ್ ಆಂಗ್ಲ ಮಾಧ್ಯಮ ಶಾಲೆಯ ಆಡಳಿತ ಮಂಡಳಿ ಅಧ್ಯಕ್ಷ, ವಿಠಲ್‌ ಎಜ್ಯುಕೇಶನ್‌ ಸೊಸೈಟಿ ಸಂಚಾಲಕ ಎಲ್. ಎನ್. ಕೂಡೂರುರವರು ಜೂ.30ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಎಲ್. ಎನ್. ಕೂಡೂರುರವರು ಕೃಷಿಕರಾಗಿದ್ದು, ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ನಲ್ಲಿ ಹಲವು ವರ್ಷಗಳ ಕಾಲ ಅಧ್ಯಕ್ಷರಾಗಿ, ಕ್ಯಾಪ್ಕೋ ದ ಮಾಜಿ ಅಧ್ಯಕ್ಷರಾಗಿ, ಜೆಸಿಐ ಇಂಡಿಯಾ ನ್ಯಾಷನಲ್ ವೈಸ್ ಪ್ರೆಸಿಡೆಂಟ್ ಆಗಿ ಸೇವೆ ಸಲ್ಲಿಸಿದ್ದಾರೆ. ವಿಟ್ಲ ಪಂಚಲಿಂಗೇಶ್ವರ ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

ಎಲ್.ಎನ್.ಕೂಡೂರುರವರು ಮನೆಯಲ್ಲಿದ್ದ ಸಂದರ್ಭ ಅವರಿಗೆ ಹೃದಯಾಘಾತ ಕಾಣಿಸಿಕೊಂಡಿದ್ದು, ತಕ್ಷಣವೇ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರು ಅಲ್ಲಿ ಅವರು ಮೃತಪಟ್ಟರು ಎಂದು ಮಾಹಿತಿ ಲಭಿಸಿದೆ.

ಮೃತರು ಕೂಡೂರು ಕೃಷ್ಣ ಭಟ್ ಮತ್ತು ಕಮಲಮ್ಮ ದಂಪತಿಗಳ ಪುತ್ರರಾಗಿದ್ದು, ಪತ್ನಿ ಮತ್ತು ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ. ಅಂತ್ಯಸಂಸ್ಕಾರವು ಇಂದು ಕೂಡೂರು ಮನೆಯಲ್ಲಿ ನಡೆಯಲಿದೆ ಎಂದು ಅವರ ಬಂಧುಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here