ಕಸಾಪಾ ಪುತ್ತೂರಿನಿಂದ ಕೊಡಿಪ್ಪಾಡಿ ಗ್ರಾಮ ಸಾಹಿತ್ಯ ಸಂಭ್ರಮ – ಗ್ರಾಮದ ಸಾಧಕರಿಗೆ ಅಭಿನಂದನೆ

0

ಪುತ್ತೂರು: ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕ ನೇತೃತ್ವದಲ್ಲಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು, ಗ್ರಾಮ ಪಂಚಾಯತ್ ಕೊಡಿಪ್ಪಾಡಿ ಸಹಯೋಗದಲ್ಲಿ, ಚಿಗುರೆಲೆ ಸಾಹಿತ್ಯ ಬಳಗ ಪುತ್ತೂರು ಸಂಯೋಜನೆಯಲ್ಲಿ, ಹೊರನಾಡ ಕನ್ನಡಿಗ ಮಿತ್ರಂಪಾಡಿ ಜಯರಾಮ ರೈ ಅಬುದಾಬಿಯವರ ಪೋಷಕತ್ವದಲ್ಲಿ ಜೂ.29ರಂದು ಕೊಡಿಪ್ಪಾಡಿ ಗ್ರಾ,ಪಂ ಸಭಾಂಗಣದಲ್ಲಿ ಗ್ರಾಮ ಸಾಹಿತ್ಯ ಸಂಭ್ರಮ 14ನೇ ಸರಣಿ ಕಾರ್ಯಕ್ರಮ ನಡೆಯಿತು.


ಕಾರ್ಯಕ್ರಮ ಉದ್ಘಾಟಿಸಿದ ಗ್ರಾಮ ಪಂಚಾಯತ್ ಅಧ್ಯಕ್ಷ ಸೋಮಪ್ಪ ಪೂಜಾರಿ ಅವರು ಮಾತನಾಡಿ ಗ್ರಾಮ ಮಟ್ಟದ ಸಾಹಿತಿಗಳನ್ನ ಗುರುತಿಸಿ, ಗ್ರಾಮೀಣ ಯುವ ಮತ್ತು ವಿದ್ಯಾರ್ಥಿಗಳಿಗೆ ಸಾಹಿತ್ಯದ ಚಟುವಟಿಕೆಗಳನ್ನು ಆಯೋಜನೆ ಮಾಡುವುದರ ಮೂಲಕ ಉತ್ತಮ ಪರಿಣಾಮ ಬೀರಲು ಗ್ರಾಮ ಸಾಹಿತ್ಯ ಸಂಭ್ರಮ ಒಳ್ಳೆಯ ಕಾರ್ಯಕ್ರಮವಾಗಿದೆಯೆಂದು ಹೇಳಿದರು.
ಒಟ್ಟು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕೊಡಿಪ್ಪಾಡಿ ಸ. ಉ. ಹಿ ಪ್ರಾ ಶಾಲೆಯ ಕು ಶಮಿತ ಅವರು ಮಾತನಾಡಿ “ಇದೊಂದು ಶಾಲಾ ಮಕ್ಕಳಿಗೆ ಸಾಹಿತ್ಯದ ಬಗ್ಗೆ ಒಲವು ಮೂಡಿಸುವ ಕಾರ್ಯಕ್ರಮವಾಗಿದ್ದು ನಮ್ಮಲ್ಲಿರುವ ಪ್ರತಿಭೆಗೆ ಗ್ರಾಮ ಮಟ್ಟದಲ್ಲಿ ಗುರುತಿಸಿ ಪ್ರೋತ್ಸಾಹಿಸುವ ಕನ್ನಡ ಸಾಹಿತ್ಯ ಪರಿಷತ್ತಿಗೆ ಕೃತಜ್ಞತೆಯನ್ನು ಅರ್ಪಿಸಿದರು.

ಸಾಧಕರಿಗೆ ಅಭಿನಂದನೆ:
ವಿವಿಧ ಕ್ಷೇತ್ರದ ಸಾಧನೆಗೈದ ಗ್ರಾಮದವರಾದ ಬಿ. ರಾಧಾಕೃಷ್ಣ ಭಟ್ ಬಟ್ರಪ್ಪಾಡಿ, ಮನ್ಮಥ ಶೆಟ್ಟಿ, ರವೀಂದ್ರ ಆಚಾರ್ಯ ಇವರನ್ನು ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿ ಹಾಗು ಸುದಾನ ಶಿಕ್ಷಣ ಸಂಸ್ಥೆಯ ಸಂಚಾಲಕ ಡಾ. ಪೀಟರ್ ವಿಲ್ಸನ್ ಪ್ರಭಾಕರ್ ರವರು ಅಭಿನಂದಿಸಿ ಅಭಿನಂದನಾ ನುಡಿಗಳನ್ನಾಡಿದರು. ಅಭಿನಂದನೆ ಸ್ವೀಕರಿಸಿದವರ ಪರವಾಗಿ ಮನ್ಮಥ ಶೆಟ್ಟಿ ಅನಿಸಿಕೆ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಚಿಗುರೆಲೆ ಸಾಹಿತ್ಯ ಬಳಗದ ಸದಸ್ಯರಾದ ವಾರ್ತಾ ಭಾರತಿ ಪತ್ರಿಕೆಯ ಬೆಂಗಳೂರು ವರದಿಗಾರರಾದ ಇಬ್ರಾಹಿಂ ಖಲೀಲ್ ರವರು ಪತ್ರಿಕಾ ವರದಿಯಲ್ಲಿ ಮಾಡಿರುವ ಸಾಧನೆಗಾಗಿ ಗೌರವಿಸಲಾಯಿತು.

ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಶರೀಫ್ ರವರು ಶುಭಾ ಹಾರೈಸಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ಘಟಕದ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್ ವಹಿಸಿ ಕಾರ್ಯಕ್ರಮದ ಯಶಸ್ವಿಗೆ ಸಹಕಾರ ನೀಡಿದ ಕೊಡಿಪ್ಪಾಡಿ ಗ್ರಾಮಸ್ಥರಿಗೆ ಕೃತಜ್ಞತೆ ಸಲ್ಲಿಸಿದರು.
ಸಮಾರಂಭದಲ್ಲಿ ಶಿವಮಣಿ ಕಲಾ ತಂಡದ ಮನುಕುಮಾರ್ ಶಿವನಗರ ಇವರ ಡಿಜಿಟಲ್ ವಾರ ಪತ್ರಿಕೆ ಶಿವಮಣಿ ಕಲಾರಂಗ ವನ್ನು ಗ್ರಾಮ ಪಂಚಾಯತ್ ಪಿಡಿಒ ಶರೀಫ್ ಅವರು ಬಿಡುಗಡೆಗೊಳಿಸಿದರು. ಪುತ್ತೂರಿನ ಉಪತಹಸಿಲ್ದಾರ್ ಕುಮಾರಿ ಸುಲೋಚನಾ ಅವರು ಸಾಹಿತ್ಯ ಪರಿಷತ್ತಿಗೆ ೫೦೦ ಪುಸ್ತಕಗಳನ್ನು ಕೊಡುಗೆಯಾಗಿ ನೀಡಿದರು. ಚಿಗುರೆಲೆ ಸಾಹಿತ್ಯ ಬಳಗದ ಪ್ರತೀಕ್ಷಾ ಆರ್ ಕಾವು ಸ್ವಾಗತಿಸಿ, ಗ್ರಾಮ ಸಾಹಿತ್ಯ ಸಂಭ್ರಮದ ಸಂಚಾಲಕರಾದ ನಾರಾಯಣ ಕುಂಬ್ರ ಪ್ರಾಸ್ತಾವಿಕ ನುಡಿಗಳನ್ನಾಡಿದರು. ವಿಂಧ್ಯಾ ಎಸ್ ರೈ ಕಾರ್ಯಕ್ರಮ ನಿರೂಪಿಸಿ, ರಶ್ಮಿತಾ ಸುರೇಶ್ ಜೋಗಿಬೆಟ್ಟು ವಂದಿಸಿದರು.

ಸಭಾ ಕಾರ್ಯಕ್ರಮದ ಬಳಿಕ ಸಾಹಿತ್ಯಕ್ಕೆ ಕೊಡಿಪ್ಪಾಡಿ ಗ್ರಾಮದ ಕೊಡುಗೆ ಕುರಿತು ಬಿ. ರಾಧಾಕೃಷ್ಣ ಭಟ್ ಬಟ್ರಪ್ಪಾಡಿ ಹಾಗು ಕನ್ನಡದಲ್ಲೂ ಐ ಎ ಎಸ್ ಬರೆಯಿರಿ ಕುರಿತು ಉಪನ್ಯಾಸವನ್ನು ಪ್ರಣವ್ ಭಟ್ ನೆರವೇರಿಸಿದರು. ತದನಂತರ ಕೊಡಿಪ್ಪಾಡಿ ಮತ್ತು ಅರ್ಕ ಶಾಲೆಯ ವಿದ್ಯಾರ್ಥಿಗಳಿಗೆ ಗಣೇಶ್ ಎಸ್ ರವರ ಅಧ್ಯಕ್ಷತೆಯಲ್ಲಿ ಬಾಲಕವಿಗೋಷ್ಠಿ, ಶ್ರೀಮತಿ ಸುರೇಖಾ ರೈ ಯವರ ಅಧ್ಯಕ್ಷತೆಯಲ್ಲಿ ಬಾಲ ಕಥಾಗೋಷ್ಠಿ ಜರಗಿತು. ಉಭಯ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಮಧ್ಯಾಹ್ನ ನಂತರ ಕೊಡಿಪ್ಪಾಡಿ ಅಂಚೆ ಪಾಲಕಿ ಸಹನಾ ಎಸ್. ಎಚ್ ರವರ ಅಧ್ಯಕ್ಷತೆಯಲ್ಲಿ ಸಾರ್ವಜನಿಕ ವಿಭಾಗದ ಯುವಕವಿಗೋಷ್ಠಿ ನಡೆಯಿತು. ಕವಿಗೋಷ್ಠಿಯಲ್ಲಿ ಯಶಸ್ವಿ ಗಣೇಶ್ ಸೋಮವಾರಪೇಟೆ, ದೇವಿಕಾ ಜೆ. ಜಿ. ಬನ್ನೂರು, ಉಮಾಶಂಕರಿ ಮರಿಕೆ, ಮನುಕುಮಾರ್ ಶಿವನಗರ, ವಿಂಧ್ಯಾ ಎಸ್ ರೈ, ರಶ್ಮಿತಾ ಸುರೇಶ್ ಜೋಗಿಬೆಟ್ಟು, ಗಿರೀಶ್ ಉಪ್ಪಿನಂಗಡಿ, ಅಕ್ಷತಾ ನಾಗನಕಜೆ ಭಾಗವಹಿಸಿದ್ದರು. ಸಮಾರೋಪ ಭಾಷಣವನ್ನು ಸ. ಹಿ. ಪ್ರಾ. ಶಾಲೆ ಅರ್ಕ ಇಲ್ಲಿನ ವಿದ್ಯಾರ್ಥಿನಿ ಕು. ಅನ್ವಿತರವರು ವಹಿಸಿದ್ದರು. ವೇದಿಕೆಯಲ್ಲಿ ಹಿರಿಯ ಸಾಹಿತಿಗಳು ಮಧು ಪ್ರಪಂಚ ಪತ್ರಿಕೆ ಸಂಪಾದಕ ನಾರಾಯಣ ರೈ ಕುಕ್ಕುವಳ್ಳಿ ಉಪಸ್ಥಿತರಿದ್ದರು. ವಿವಿಧ ಗೋಷ್ಠಿಗಳಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಗಿರಿಧರ್ ಗೌಡ, ಶ್ರೀಮತಿ ಸ್ಮಿತಾ. ಪಿ. ರವರು ಗೌರವ ಉಪಸ್ಥಿತರಿದ್ದರು. ಅಲ್ಲದೇ ಗ್ರಾಮ ಪಂಚಾಯತ್ ಕೊಡಿಪ್ಪಾಡಿಯ ಸಿಬ್ಬಂದಿಗಳಾದ ರವೀಂದ್ರ ಆಚಾರ್ಯ, ಕಿಶನ್ ಕುಮಾರ್ ಮತ್ತು ಪ್ರಶಾಂತ್ ಅರ್ಕ ಸಹಕರಿಸಿದ್ದರು. ಗೋಷ್ಠಿಗಳನ್ನು ರಶ್ಮಿತಾ ಸುರೇಶ್ ಜೋಗಿಬೆಟ್ಟು, ಅಪೂರ್ವ ಕಾರಂತ್, ಪ್ರತೀಕ್ಷಾ ಆರ್ ಕಾವು, ಅಕ್ಷತಾ ನಾಗನಕಜೆ ನಿರ್ವಹಿಸಿದರು. ಕಾರ್ಯಕ್ರಮ ಕನ್ನಡ ಭುವನೇಶ್ವರಿಗೆ ಪುಷ್ಪಾರ್ಚನೆಗೈದು ನಾಡಗೀತೆಯೊಂದಿಗೆ ಆರಂಭಗೊಂಡು ರಾಷ್ಟ್ರ ಗೀತೆಯೊಂದಿಗೆ ಸಮಾಪನಗೊಂಡಿತು.

LEAVE A REPLY

Please enter your comment!
Please enter your name here