ಕಾಣಿಯೂರು- ಕಾಂಞಂಗಾಡ್ ರೈಲ್ವೆ ಯೋಜನೆ, ಅಡಿಕೆ ಹಳದಿ ಎಲೆ ರೋಗದ ಪರಿಹಾರಕ್ಕೆ ಭರವಸೆ – ಕ್ಯಾ| ಬ್ರಿಜೇಶ್ ಚೌಟ

0

ಕಾಣಿಯೂರು: ಸುಳ್ಯ ವಿಧಾನಸಭಾ ಕ್ಷೇತ್ರ ದ.ಕ. ಜಿಲ್ಲೆಯಲ್ಲಿಯೇ ಒಂದಯ ಮಾದರಿ ಕ್ಷೇತ್ರ. ಉತ್ತಮ ಕಾರ್ಯಕರ್ತರ ಪಡೆ ಇಲ್ಲಿದ್ದು, ನಿರಂತರವಾಗಿ ಮತದಾರರ ಸಂಪರ್ಕದಲ್ಲಿರುವುದು ನಮಗೆಲ್ಲ ಆದರ್ಶನೀಯ ಎಂದು ದಕ್ಷಿಣ ಕನ್ನಡದ ಸಂಸತ್ ಸದಸ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟ ಹೇಳಿದರು. ಅವರು ಸುಳ್ಯ ಬಿಜೆಪಿ ನೂತನ ಕಾರ್ಯಾಲಯಕ್ಕೆ ಭೇಟಿ, ನೀಡಿ ಮಾತನಾಡಿದರು. ಸುಳ್ಯ ಪ್ರದೇಶದಲ್ಲಿ ಬಾಧಿಸಿರುವ ಅಡಿಕೆ ಎಲೆ ಚುಕ್ಕಿ ರೋಗ, ಅಡಿಕೆ ಹಳದಿ ಎಲೆ ರೋಗದ ಬಗ್ಗೆ ಕೇಂದ್ರ ಕೃಷಿ ಸಚಿವರ ಜೊತೆ ಮಾತನಾಡಿ ಪರಿಹಾರಕ್ಕೆ ಪ್ರಯತ್ನ ನಡೆಸುತ್ತೇನೆ. ಅದಲ್ಲದೇ ಇಲ್ಲಿನ ಜನರ ಬೇಡಿಕೆಯಾದ ಕಾಂಞಂಗಾಡ್ – ಕಾಣಿಯೂರು ರೈಲು ಮಾರ್ಗದ ಕುರಿತು ರೈಲ್ವೆ ಖಾತೆ ರಾಜ್ಯ ಸಚಿವರಾದ ಸೋಮಣ್ಣರೊಂದಿಗೆ ಚರ್ಚಿಸಿತ್ತೇನೆ ಎಂದು ತಿಳಿಸಿದರು. ಜೊತೆಗೆ ಸುಳ್ಯದ ವಿದ್ಯುತ್ ಸಮಸ್ಯೆ, ಗ್ರಾಮೀಣ ಭಾಗದ ಮೊಬೈಲ್ ನೆಟ್ವರ್ಕ್ ಸಮಸ್ಯೆಗೆ ಪರಿಹಾರ ಒದಗಿಸುವ ಪ್ರಯತ್ನ ಮಾಡುವುದಾಗಿ ಹೇಳಿದರು. ಮುಂದಿನ ದಿನಗಳಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಕಾರ್ಯಕರ್ತರ ಸಂವಾದ , ಜನರ ಸಂವಾದ ಆಧಾರಿತ ಕಾರ್ಯಕ್ರಮ ಹಮ್ಮಿಕೊಂಡು, ಕಾರ್ಯಕರ್ತರ ಹಾಗೂ ಜನರ ಧ್ವನಿಯಾಗಿ ಕೆಲಸ ಮಾಡುವುದಾಗಿ ಕ್ಯಾಪ್ಟನ್ ಬ್ರಿಜೇಶ್ ಚೌಟರು ತಿಳಿಸಿದರು.
ಶಾಸಕಿ ಭಾಗೀರಥಿ ಮುರುಳ್ಯ ಮಾತನಾಡಿ ಮುಂದಿನ ದಿನಗಳಲ್ಲಿ ಲೋಕಸಭಾ ಚುನಾವಣಾ ಗೆಲುವಿಗೆ ಶ್ರಮಿಸಿದ ಕಾರ್ಯಕರ್ತರರಿಗೆ ಹಾಗೂ ಮತದಾರರಿಗೆ ಪಕ್ಷದ ವತಿಯಿಂದ ಕೃತಜ್ಞತಾ ಸಭೆ ನಡೆಸಲಿದ್ದೇವೆ. ಪಕ್ಷದ ಪ್ರಮುಖರೊಂದಿಗೆ ಚರ್ಚಿಸಿ ಅದರ ರೂಪು ರೇಷೆಗಳನ್ನು ತೀರ್ಮಾನಿಸಲಾಗುವುದು ಎಂದು ಹೇಳಿದರು.


ಮಾಜಿ ಸಚಿವ ಎಸ್. ಅಂಗಾರರು ಮಾತನಾಡಿ ಕಾರ್ಯಕರ್ತರ ನಿರಂತರ ಸಂಪರ್ಕ ಇಟ್ಟುಕೊಂಡಾಗ ಸಂಘಟನೆ ಬಲಗೊಳ್ಳಲು ಸಾಧ್ಯ. ಸುಳ್ಯದಲ್ಲಿ ಅಂತಹ ಕಾರ್ಯಕರ್ತರ ಪಡೆಯಿದ್ದ ಕಾರಣ ಅತ್ಯಧಿಕ ಮತಗಳಿಂದ ನಾವು ಲೋಕಸಭಾ ಚುನಾವಣೆಯಲ್ಲಿ ಬ್ರಿಜೇಶ್ ಚೌಟರಿಗೆ ಗೆಲುವು ಸಾಧಿಸಲು ಸಾಧ್ಯವಾಗಿದೆ ಎಂದು ಹೇಳಿದರು.
ಮೀನುಗಾರಿಕಾ ನಿಗಮದ ಮಾಜಿ ಅಧ್ಯಕ್ಷ ಎ.ವಿ. ತೀರ್ಥರಾಮರು ಮಾತನಾಡಿದರು.‌

ಈ ವೇಳೆ ನೂತನವಾಗಿ ಸಂಸದರಾಗಿ ಆಯ್ಕೆಯಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರನ್ನು ಸುಳ್ಯ ಬಿಜೆಪಿ ಮಂಡಲ ಸಮಿತಿಯ ವತಿಯಿಂದ ಸನ್ಮಾನಿಸಿ, ಗೌರವಿಸಲಾಯಿತು.
ಸಂಸದರು ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಸಂಸ್ಮರಣಾ ದಿನದ ಪ್ರಯುಕ್ತ ಬಿಜೆಪಿ ಕಛೇರಿಯ ಆವರಣದಲ್ಲಿ ಹಣ್ಣಿನ ಗಿಡಗಳನ್ನು ನೆಟ್ಟರು.
ಈ ಸಂದರ್ಭದಲ್ಲಿ ಪಕ್ಷದ ಮುಖಂಡರುಗಳಾದ ವೆಂಕಟ್ ದಂಬೆಕೋಡಿ, ಸಂತೋಷ್ ಕುತ್ತಮೊಟ್ಟೆ, ವಿನಯಕುಮಾರ್ ಮುಳುಗಾಡು, ಸಂತೋಷ್ ಜಾಕೆ, ಜಯರಾಜ್ ಕುಕ್ಕೇಟಿ, ಚನಿಯ ಕಲ್ತಡ್ಕ, ಸುರೇಶ್ ಕಣೆಮರಡ್ಕ, ಶಿವಾನಂದ ಕುಕ್ಕುಂಬಳ, ಎ.ಟಿ. ಕುಸುಮಾಧರ, ಆರ್.ಕೆ. ಭಟ್ ಕುರುಂಬುಡೇಲು, ಸುಬೋದ್ ಶೆಟ್ಟಿ ಮೇನಾಲ, ಮಹಿಳಾ ಮೋರ್ಚಾದ ಅಧ್ಯಕ್ಷೆ ಇಂದಿರಾ ಬಿ.ಕೆ. ಆಲೆಟ್ಟಿ ಮಹಾಶಕ್ತಿಕೇಂದ್ರದ ಅಧ್ಯಕ್ಷೆ ಭಾರತಿ ಪುರುಷೋತ್ತಮ, ಅಜ್ಜಾವರ ಮಹಾಶಕ್ತಿಕೇಂದ್ರದ ಅಧ್ಯಕ್ಷ ಹೇಮಂತ್ ಮಠ, ಮಾಜಿ ತಾ.ಪಂ. ಉಪಾಧ್ಯಕ್ಷೆ ಪುಷ್ಪಾ ಮೇದಪ್ಪ, ಮಾಜಿ ಜಿ.ಪಂ. ಸದಸ್ಯೆ ಆಶಾ ತಿಮ್ಮಪ್ಪ ಸೇರಿದಂತೆ ಪಕ್ಷದ ಹಿರಿಯ, ಕಿರಿಯ ಕಾರ್ಯಕರ್ತರು, ಮಹಿಳಾ ಮೋರ್ಚಾದ ಪದಾಧಿಕಾರಿಗಳು ಸೇರಿದಂತೆ ನೂರಾರು ಮಂದಿ ಕಾರ್ಯಕರ್ತರುಗಳು ಉಪಸ್ಥಿತರಿದ್ದರು.
ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ಪ್ರದೀಪ್ ರೈ ಮನವಳಿಕೆ ವಂದಿಸಿದರು. ಪ್ರಧಾನ ಕಾರ್ಯದರ್ಶಿ ವಿನಯಕುಮಾರ್ ಕಂದಡ್ಕ ಕಾರ್ಯಕ್ರಮ ನಿರೂಪಿಸಿದರು.

ದಕ್ಷಿಣ ಕನ್ನಡದ ಸಂಸತ್ ಸದಸ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟರು ಸಂಸತ್ ಸದಸ್ಯರಾದ ಬಳಿಕ ಇದೇ ಮೊದಲ ಬಾರಿಗೆ ಜೂ.30ರಂದು ಸುಳ್ಯಕ್ಕೆ ಭೇಟಿ ನೀಡಿದರು. ಈ ವೇಳೆ ನೂತನವಾಗಿ ಸಂಸದರಾಗಿ ಆಯ್ಕೆಯಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರನ್ನು ಸುಳ್ಯ ಬಿಜೆಪಿ ಮಂಡಲ ಸಮಿತಿಯ ವತಿಯಿಂದ ಸನ್ಮಾನಿಸಿ, ಗೌರವಿಸಲಾಯಿತು.

LEAVE A REPLY

Please enter your comment!
Please enter your name here