ಚಾರ್ವಾಕ: ಸಸಿ ನೆಡುವ ಮೂಲಕ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿಯವರ ಸಂಸ್ಮರಣೆ

0

ಕಾಣಿಯೂರು: ಜನಸಂಘದ ಸ್ಥಾಪಕ ಅಧ್ಯಕ್ಷರು ಪ್ರಾತಃ ಸ್ಮರಣೀಯರಾದ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿಯವರ ಪುಣ್ಯ ದಿನ ಪ್ರಯುಕ್ತ ಸವಣೂರು ಮಹಾ ಶಕ್ತಿ ಕೇಂದ್ರದ ಚಾರ್ವಾಕ ಗ್ರಾಮದ ಬೂತ್ ಸಂಖ್ಯೆ 61ರಲ್ಲಿ ಸಸಿ ನೆಡುವ ಮೂಲಕ ಅವರ ಸಂಸ್ಮರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಸುಳ್ಯ ಮಂಡಲದ ಕಾರ್ಯದರ್ಶಿ ಗಣೇಶ್ ಕೆ‌ ಎಸ್ ಉದ‌ನಡ್ಕ, ಶಕ್ತಿ ಕೇಂದ್ರದ ಪ್ರಮುಖ್ ಧನಂಜಯ ಕೇನಾಜೆ, ಬೂತ್ ಸಮಿತಿಯ ಅಧ್ಯಕ್ಷರಾದ ವಿಶ್ವನಾಥ್ ದೇವಿನಗರ, ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾದ ಸತ್ಯನಾರಾಯಣ ಕಲ್ಲೂರಾಯ, ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕರುಗಳು ಹಾಗೂ ಚಾರ್ವಾಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರುಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here