ಆಲಂಕಾರು ಹಾಲು ಉತ್ಪಾದಕರ ಸಹಕಾರಿ ಸಂಘದ ಕಾರ್ಯನಿರ್ವಹಣಾಧಿಕಾರಿ ಗಣೇಶ ರೈ .ಕೆ ಮನವಳಿಕೆ ಸೇವಾ ನಿವೃತ್ತಿ-ಇಂದು ಬೀಳ್ಕೊಡುಗೆ ಕಾರ್ಯಕ್ರಮ

0

ಆಲಂಕಾರು :ಆಲಂಕಾರು ಹಾಲು ಉತ್ಪಾದಕರ ಸಹಕಾರಿ ಸಂಘದ ಕಾರ್ಯನಿರ್ವಹಣಾಧಿಕಾರಿ ಗಣೇಶ ರೈ .ಕೆ ಮನವಳಿಕೆ ಜೂ.30 ರಂದು ಸೇವಾ ನಿವೃತ್ತಿಗೊಂಡಿದ್ದು ಇವರ ಬೀಳ್ಕೋಡುಗೆ ಕಾರ್ಯಕ್ರಮ ಇಂದು ಜು.1 ರಂದು ಸಂಜೆ 5:00 ಕ್ಕೆ ಆಲಂಕಾರು ಹಾಲು ಉತ್ಪಾದಕರ ಸಹಕಾರಿ ಸಂಘದ ಸಭಾಭವನದಲ್ಲಿ ಸಂಘದ ಅಧ್ಯಕ್ಷರಾದ ಮಾಧವ ಪೂಜಾರಿ ಕಯ್ಯಪ್ಪೆ ಇವರ ಅಧ್ಯಕ್ಷತೆ ನಡೆಯಲಿದೆ.

ದ.ಕ ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟ ನಿಯಮಿತ ಮಂಗಳೂರಿನ ಅಧ್ಯಕ್ಷ ಸುಚರಿತ ಶೆಟ್ಟಿ ಸನ್ಮಾನಿಸಲಿದ್ದು,ಮುಖ್ಯ ಅತಿಥಿಗಳಾಗಿ ದ.ಕ ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟ ನಿಯಮಿತ ಮಂಗಳೂರಿನ ಉಪಾಧ್ಯಕ್ಷರಾದ ಎಸ್.ಬಿ ಜಯರಾಮ ರೈ,ನಿರ್ದೇಶಕರಾದ ನಾರಾಯಣ ಪ್ರಕಾಶ್ ಕೆ,ವ್ಯವಸ್ಥಾಪಕ ಡಾ.ರವಿರಾಜ ಉಡುಪ,ಉಪವ್ಯವಸ್ಥಾಪಕ ಡಾ.ಡಿ.ಆರ್ ಸತೀಶ್ ರಾವ್ ಭಾಗವಹಿಸಲಿದ್ದಾರೆ ಈ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಎಲ್ಲರೂ ಭಾಗವಹಿಸುವಂತೆ ಸಂಘದ ಅಧ್ಯಕ್ಷರಾದ ಮಾಧವ ಪೂಜಾರಿ, ಉಪಾಧ್ಯಕ್ಷ ಮುರಳೀಧರ ರೈ ಮನವಳಿಕೆ ವಿಸ್ತರಣಾಧಿಕಾರಿ ಅದಿತ್ಯ.ಸಿ,ಅಡಳಿತ ಮಂಡಳಿ ನಿರ್ದೇಶಕರು ಹಾಗು ಕಾರ್ಯದರ್ಶಿ, ಸಿಬ್ಬಂದಿ ವರ್ಗ ಹಾಗು ಸರ್ವ ಸದಸ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here