ರೋಟರಿ ಎಲೈಟ್ ನಿಂದ ಸುದಾನ ಪಿಯು ಕಾಲೇಜಿನಲ್ಲಿ ಪತ್ರಿಕಾ ದಿನಾಚರಣೆ

0

ಪುತ್ತೂರು: ರೋಟರಿ ಕ್ಲಬ್ ಪುತ್ತೂರು ಎಲೈಟ್ ವತಿಯಿಂದ ಮಂಜಲ್ಪಡ್ಪು ಸುದಾನ ಸಮೂಹ ಶಿಕ್ಷಣ ಸಂಸ್ಥೆಗಳ ಸುದಾನ ಪದವಿ ಪೂರ್ವ ಕಾಲೇಜಿನಲ್ಲಿ ಜು.1ರಂದು ಪತ್ರಿಕಾ ದಿನಾಚರಣೆಯನ್ನು ಆಚರಿಸಲಾಯಿತು.

ಸುದಾನ ಪದವಿ ಪೂರ್ವ ಕಾಲೇಜಿನ ಸಂಚಾಲಕ ಡಾ|ಪೀಟರ್ ವಿಲ್ಸನ್ ಪ್ರಭಾಕರ್ ಮಾತನಾಡಿ, ವಿದ್ಯಾರ್ಥಿಗಳ ಜೀವನದಲ್ಲಿ ಇತಿಹಾಸದ ಬಗ್ಗೆ ಒಲವು ಕಡಿಮೆ ಆಗ್ತಾ ಇದೆ. ವಿದ್ಯಾರ್ಥಿಗಳು ಇತಿಹಾಸದ ಬಗ್ಗೆ ಹೆಚ್ಚೆಚ್ಚು ತಿಳಿಯುವವರಾಗಬೇಕು ಮಾತ್ರವಲ್ಲ ಅದರ ಅಗತ್ಯತೆ ಮತ್ತು ಪೋಷಣೆ ಮಾಡುವವರಾಗಬೇಕು ಎಂದು ಹೇಳಿ ಭಾರತದಲ್ಲಿನ ಪ್ರಿಂಟಿಂಗ್ ಪ್ರೆಸ್ ಯಾವಾಗ ಆರಂಭವಾಯಿತು ಹಾಗೂ ಅದರ ಬೆಳವಣಿಗೆ ಮತ್ತು ಪತ್ರಿಕಾ ಮಾಧ್ಯಮ ಹಾಗೂ ಸಾಮಾಜಿಕ ಮಾಧ್ಯಮಗಳ ಪ್ರಾಮುಖ್ಯತೆ ಬಗ್ಗೆ ಮಾತನಾಡಿದರು.

ಅಧ್ಯಕ್ಷತೆ ವಹಿಸಿದ ರೋಟರಿ ಕ್ಲಬ್ ಪುತ್ತೂರು ಎಲೈಟ್ ಅಧ್ಯಕ್ಷ ಅಶ್ವಿನ್ ಎಲ್ ಶೆಟ್ಟಿ ಮಾತನಾಡಿ, ವಿದ್ಯಾರ್ಥಿ ದಿಶೆಯಲ್ಲಿ ಪತ್ರಿಕಾ ರಂಗದ ಬಗ್ಗೆ ವಿದ್ಯಾರ್ಥಿಗಳು ಒಲವನ್ನು ಮೂಡಿಸಿಕೊಳ್ಳಬೇಕು, ಅದರೊಂದಿಗೆ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದರು.

ಕ್ಲಬ್ ಸಮುದಾಯ ಸೇವಾ ವಿಭಾಗದ ನಿರ್ದೇಶಕ ಆಸ್ಕರ್ ಆನಂದ್ ಸ್ವಾಗತಿಸಿ, ಸುದಾನ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸುಪ್ರೀತ್ ಕೆ.ಸಿ ವಂದಿಸಿದರು. ರೋಟರಿ ಎಲೈಟ್ ಸದಸ್ಯ ಬಾಲು ಸುದಾನ, ಸುದಾನ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಕ್ಯಾರಲ್ ಫೆರ್ನಾಂಡೀಸ್, ಮುಕುಂದ ಕೃಷ್ಣ ಉಪಸ್ಥಿತರಿದ್ದರು. ರೋಟರಿ ಎಲೈಟ್ ಕಾರ್ಯದರ್ಶಿ ಮೌನೇಶ್ ವಿಶ್ವಕರ್ಮ ಕಾರ್ಯಕ್ರಮ ನಿರೂಪಿಸಿದರು.

ಸನ್ಮಾನ:
ಪತ್ರಿಕಾ ದಿನಾಚರಣೆ ಪ್ರಯುಕ್ತ ಪತ್ರಕರ್ತ ಹಾಗೂ ರೋಟರಿ ಎಲೈಟ್ ಕಾರ್ಯದರ್ಶಿ ಮೌನೇಶ್ ವಿಶ್ವಕರ್ಮರವರನ್ನು ಸನ್ಮಾನಿಸಲಾಯಿತು.

LEAVE A REPLY

Please enter your comment!
Please enter your name here