ಕಡಬ : ತಾಲೂಕು ಜನಜಾಗೃತಿ ವೇದಿಕೆಯ ಸಭೆ

0

ಪುತ್ತೂರು : ಕಡಬ ತಾಲೂಕು ಜನಜಾಗೃತಿ ವೇದಿಕೆಯ ಸಭೆಯು ಕಡಬ ಯೋಜನಾ ಕಛೇರಿಯ ಸಭಾಂಗಣದಲ್ಲಿ ನಡೆಯಿತು.ಸಭೆಯ ಅಧ್ಯಕ್ಷತೆಯನ್ನು ಕಡಬ ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷ ಮಹೇಶ್ ಕೆ ಸವಣೂರು ರವರು ವಹಿಸಿದ್ದರು.

ಜಿಲ್ಲಾ ನಿರ್ದೇಶಕರಾದ ಪ್ರವೀಣ್ ಕುಮಾರ್ ರವರು ಸಭೆಯನ್ನು ಉದ್ಘಾಟಿಸಿ ಜನಜಾಗೃತಿ ವೇದಿಕೆಯ ಕಾರ್ಯಕ್ರಮಗಳ ಬಗ್ಗೆ ವಿವರಿಸಿದರು.ವೇದಿಕೆಯಲ್ಲಿ ಕಡಬ ವಲಯದ ಅಧ್ಯಕ್ಷರಾದ ಕರುಣಾಕರ ಗೋಗಟೆ, ಗೋಳಿತೊಟ್ಟು ವಲಯದ ಜನಜಾಗೃತಿ ವೇದಿಕೆಯ ಅಧ್ಯಕ್ಷ ನೋಣಯ್ಯ ಪೂಜಾರಿ,ಬಿಳಿನೆಲೆ ವಲಯದ ಅಧ್ಯಕ್ಷ ತಮ್ಮಣ್ಣ ಗೌಡ, ನೆಲ್ಯಾಡಿ ವಲಯ ಜನಜಾಗೃತಿ ವೇದಿಕೆಯ ಅಧ್ಯಕ್ಷ ಜಯಾನಂದ ಬಂಟ್ರಿಯಾಳ್ ,ಮತ್ತು ಅಲಂಕಾರು ವಲಯದ ಜನಜಾಗೃತಿ ವೇದಿಕೆಯ ಅಧ್ಯಕ್ಷ ಇಂದುಶೇಖರ್ ಶೆಟ್ಟಿ ಉಪಸ್ಥಿತರಿದ್ದರು.

ಕಡಬ ತಾಲೂಕಿನ ಆರು ವಲಯದ ಜನಜಾಗೃತಿ ವೇದಿಕೆಯ ಪದಾಧಿಕಾರಿಗಳು, ವಲಯದ ಮೇಲ್ವಿಚಾರಕರು, ನವಜೀವನ ಸಮಿತಿಯ ಪೋಷಕರು ಸಭೆಯಲ್ಲಿ ಭಾಗವಹಿಸಿದ್ದರು.
ತಾಲೂಕು ಯೋಜನಾಧಿಕಾರಿ ಮೇದಪ್ಪ ಗೌಡ ನಾವೂರು ಪ್ರಸ್ತಾವನೆಯೊಂದಿಗೆ ಸ್ವಾಗತಿಸಿದರು.ಕಡಬ ವಲಯದ ಮೇಲ್ವಿಚಾರಕ ರವಿಪ್ರಸಾದ್ ನಿರೂಪಿಸಿ, ನೆಲ್ಯಾಡಿ ವಲಯ ಮೇಲ್ವಿಚಾರಕ ವಿಜೇಶ್ ವಂದಿಸಿದರು.

LEAVE A REPLY

Please enter your comment!
Please enter your name here