ಸವಣೂರು : ಶ್ಯಾಮಪ್ರಸಾದ ಮುಖರ್ಜಿ ಪುಣ್ಯಸ್ಮರಣೆ -ಸಸಿನಾಟಿ ಕಾರ್ಯಕ್ರಮ

0

ಸವಣೂರು : ಜನಸಂಘದ ಸ್ಥಾಪಕರಾದ ಶ್ಯಾಮಪ್ರಸಾದ ಮುಖರ್ಜಿ ಅವರ ಪುಣ್ಯಸ್ಮರಣೆಯ ಅಂಗವಾಗಿ ಬಿಜೆಪಿ ಸುಳ್ಯ ಮಂಡಲ ,ಬಿಜೆಪಿ ಎಸ್.ಟಿ.ಮೋರ್ಚಾ ಸುಳ್ಯ ಮಂಡಲ,ಬಿಜೆಪಿ ಸವಣೂರು ಮಹಾಶಕ್ತಿ ಕೇಂದ್ರ ಇದರ ವತಿಯಿಂದ ಸಸಿನಾಟಿ ಕಾರ್ಯಕ್ರಮ ಸವಣೂರಿನ ಕಾಯರ್ಗದಲ್ಲಿ ನಡೆಯಿತು.ಸವಣೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಕೃಷ್ಣ ಭಟ್ ಕುಕ್ಕುಜೆ ಅವರು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಬಿಜೆಪಿ ಎಸ್.ಟಿ.ಮೋರ್ಚಾ ಸುಳ್ಯ ಮಂಡಲ ಸಮಿತಿ ಅಧ್ಯಕ್ಷ ಗಂಗಾಧರ ಪೆರಿಯಡ್ಕ ,ಪ್ರಧಾನ ಕಾರ್ಯದರ್ಶಿಗಳಾದ ಬಾಲಕೃಷ್ಣ ಏನೆಕಲ್ಲು,ಬಾಲಕೃಷ್ಣ ಅಲಂಗಪ್ಪೆ ,ಬಿಜೆಪಿ ಸವಣೂರು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ,ಸವಣೂರು ಪ್ರಾ.ಕೃ‌.ಪ.ಸಹಕಾರ ಸಂಘದ ಅಧ್ಯಕ್ಷ ತಾರಾನಾಥ ಕಾಯರ್ಗ, ಸವಣೂರು ಗ್ರಾ.ಪಂ.ಸದಸ್ಯ ಸತೀಶ್ ಅಂಗಡಿಮೂಲೆ, ಮಾಜಿ ಸದಸ್ಯ ಸತೀಶ್ ಬಲ್ಯಾಯ,ಸವಣೂರು ಹಿಂದೂ ಜಾಗರಣ ವೇದಿಕೆಯ ಅಧ್ಯಕ್ಷ ಶ್ರೀಧರ ಇಡ್ಯಾಡಿ,ಸವಣೂರು ಹಾಲು ಉತ್ಪಾದಕರ ಸಹಕಾರ ಸಂಘದ ಮಾಜಿ ನಿರ್ದೇಶಕ ಗಣೇಶ್ ನಾಯ್ಕ ಕೆಡೆಂಜಿ, ಬಿಜೆಪಿ ಸವಣೂರು ಪಂಚಾಯತ್ ಸಮಿತಿ ಮಾಜಿ ಕಾರ್ಯದರ್ಶಿ ದಿಲೀಪ್ ಹೆಗ್ಡೆ ನೇರೋಳ್ತಡ್ಕ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here