![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ಗಿಡ ನೆಡುವುದು ಮಾತ್ರವಲ್ಲ ಆದರ ಪೋಷಣೆ ಅತೀ ಅಗತ್ಯ – ಮಹಮ್ಮದ್ ಬಡಗನ್ನೂರು
![](https://puttur.suddinews.com/wp-content/uploads/2024/07/c80b32b0-0d67-490c-981c-36871f2e8b27-1_all_58454.jpg)
ನೆಟ್ಟಣಿಗೆ ಮುಡ್ನೂರು: ಸರಕಾರಿ ಪ್ರೌಢ ಶಾಲೆ ನೆಟ್ಟಣಿಗೆ ಮುಡ್ನೂರು ಇಲ್ಲಿ ಪ್ರಕೃತಿ ಇಕೋ ಕ್ಲಬ್ ವತಿಯಿಂದ ವನಮಹೋತ್ಸವ ಕಾರ್ಯಕ್ರಮ ನಡೆಯಿತು. ಶಾಲಾ ಕಾರ್ಯಧ್ಯಕ್ಷರಾದ ಶ್ರೀರಾಮ್ ಪಕ್ಕಳ ಕರ್ನೂರು ಗುತ್ತು ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮಾಜಿ ತಾಲೂಕು ಪಂಚಾಯತ್ ಅಧ್ಯಕ್ಷರು ಹಾಗೂ ತಾಲೂಕು ಅಕ್ರಮ ಸಕ್ರಮ ಸಮಿತಿಯ ಸದಸ್ಯರಾದ ಮಹಮ್ಮದ್ ಬಡಗನ್ನೂರು
ಶುಭ ಹಾರೈಸಿದರು.
![](https://puttur.suddinews.com/wp-content/uploads/2024/07/c80b32b0-0d67-490c-981c-36871f2e8b27-1_all_58453.jpg)
ಕಾರ್ಯಕ್ರಮದಲ್ಲಿ ನೆಟ್ಟಣಿಗೆ ಮುಡ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಫೌಝಿಯಾ ಇಬ್ರಾಹಿಂ, ನೆಟ್ಟಣಿಗೆ ಮುಡ್ನೂರು ಗ್ರಾಮ ಪಂಚಾಯತ್ ನಿಕಟ ಪೂರ್ವ ಅಧ್ಯಕ್ಷರಾದ ರಮೇಶ್ ರೈ ಮಧುರ ಇಂಟರ್ನ್ಯಾಷನಲ್ ಸ್ಕೂಲ್ ನ ಸಂಚಾಲಕರಾದ ಅಬ್ದುಲ್ ರಹಿಮಾನ್ ಮೇನಾಲ. ಶಾಲಾ ಅಭಿವೃದ್ಧಿ ಮೇಲುಸ್ತುವಾರಿ ಸಮಿತಿ ಸದಸ್ಯರು ಮತ್ತು ದಾನಿಗಳಾದ ರತನ್ ನಾಯ್ಕ್ ಕರ್ನೂರು ಗುತ್ತು, ಗ್ರಾಮ ಪಂಚಾಯತ್ ಸದಸ್ಯರಾದ ಇಬ್ರಾಹಿಂ ಪಳ್ಳತ್ತೂರು, ಸಮಿತಿ ಸದಸ್ಯರಾದ ಸೂಫಿ ಬಾಂಟಡ್ಕ ಗ್ರಾಮ ಆಡಳಿತಾಧಿಕಾರಿ ಮಂಜುನಾಥ, ಗ್ರಾಮ ಸಹಾಯಕ ರಘುನಾಥ, ಗುತ್ತಿಗೆದಾರ ಅಜೀಜ್, ನಾರಾಯಣ ನಾಯ್ಕ, ಶಾರದಾ, ಶಿಕ್ಷಣ ತಜ್ಞರಾದ ಮಹಾಬಲ ರೈ ಕರ್ನೂರು ಉಪಸ್ಥಿತರಿದ್ದು ಶುಭ ಹಾರೈಸಿದರು.
ಶಾಲಾ ಮುಖ್ಯ ಶಿಕ್ಷಕ ರಾದ ಪ್ರೇಮ್ ಕುಮಾರ್ ಸ್ವಾಗತಿಸಿದರು. ಸಮಾಜ ವಿಜ್ಞಾನ ಶಿಕ್ಷಕಿ ಇಂದಿರಾ ವಂದಿಸಿದರು. ಶಿಕ್ಷಕರಾದ ಪುರುಷೋತ್ತಮ. ದೇವಿ ಪ್ರಕಾಶ್ ಶೆಟ್ಟಿ, ಉದಯ ಎಸ್. ಬಿಂದು ಸಹಕರಿಸಿದರು. ಪ್ರಕೃತಿ ಇಕೋ ಕ್ಲಬ್ ನ ಸಂಯೋಜಕಿ ಶಿಕ್ಷಕಿ ಅಮೃತವಲ್ಲಿ ಕಾರ್ಯಕ್ರಮ ನಿರೂಪಿಸಿದರು.