ನರೇಂದ್ರ ಪದವಿ ಪೂರ್ವ ಕಾಲೇಜ್ ವಿದ್ಯಾರ್ಥಿಗಳಿಂದ ಕುರಿಯ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯ

0

ಕುರಿಯ: ಉಳ್ಳಾಲ ಶ್ರೀ ಮಹಾವಿಷ್ಣು ದೇವಸ್ಥಾನ ಕುರಿಯ ಗ್ರಾಮ ಮತ್ತು ಶ್ರೀ ವಿಷ್ಣು ಸೇವಾ ಸಮಿತಿ ಕುರಿಯ ಇದರ ಸಹಕಾರದೊಂದಿಗೆ ನರೇಂದ್ರ ಪದವಿಪೂರ್ವ ಕಾಲೇಜು ತೆಂಕಿಲ ಇದರ ಗ್ರಾಮ ವಿಕಾಸ ಸಮಿತಿಯ ಕಾರ್ಯಕ್ರಮದಡಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಉಳ್ಳಾಲ ಕುರಿಯ ಗ್ರಾಮದ ಶ್ರೀ ಮಹಾವಿಷ್ಣು ಸೇವಾ ಸಮಿತಿಯ ಅಧ್ಯಕ್ಷ ಮಧು ನರಿಯೂರು, ಸ್ವಚ್ಛತೆ ಎಂಬುದು ಭಾರತೀಯ ಸಂಸ್ಕೃತಿಯ ಒಂದು ಅಂಗವಾಗಿದ್ದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದ ಇಡೀ ದೇಶವೇ ಮತ್ತೊಮ್ಮೆ ಸ್ಪೂರ್ತಿ ಪಡೆದುಕೊಂಡು ಸ್ವಚ್ಛ ದೇಶವಾಗುವತ್ತ ಕಾಲಿಡುತ್ತಿದೆ ಎಂದು ಹೇಳಿದರು.

ಈ ಕಾರ‍್ಯಕ್ರಮದಲ್ಲಿ ಶ್ರೀ ಮಹಾವಿಷ್ಣು ಸೇವಾ ಸಮಿತಿ ಕುರಿಯ ಗ್ರಾಮ ಇದರ ಕಾರ‍್ಯದರ್ಶಿಗಳಾದ ಶ್ರೀಕೃಷ್ಣ ಬೊಳಂತಿಮಾರು, ಕಾಲೇಜಿನ ಗ್ರಾಮ ವಿಕಾಸ ಸಮಿತಿಯ ಸಂಯೋಜಕ ಹಾಗೂ ಉಪನ್ಯಾಸಕ ಕಾರ್ತಿಕ್ ಕುಮಾರ್, ಗ್ರಂಥಪಾಲಕ ವಸಂತ ಕುಮಾರ್ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು. ನರೇಂದ್ರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ದೇವಸ್ಥಾನದ ಅಂಗಣ ಹಾಗೂ ಪರಿಸರ ಶುಚಿಗೊಳಿಸಿದರು.

LEAVE A REPLY

Please enter your comment!
Please enter your name here