ಜು.7: ಯುವವಾಹಿನಿ ಪುತ್ತೂರು ಘಟಕದಿಂದ`ಬಿಲ್ಲವ ವಧು-ವರಾನ್ವೇಷಣೆ 2024′

0

ಪುತ್ತೂರು: ವಿದ್ಯೆ, ಉದ್ಯೋಗ ಹಾಗೂ ಸಂಪರ್ಕದಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಪುತ್ತೂರು ಘಟಕದ ಆಶ್ರಯದಲ್ಲಿ ಜರಗಲಿರುವ`ಬಿಲ್ಲವ ವಧು-ವರಾನ್ವೇಷಣೆ 2024′ ಕಾರ್ಯಕ್ರಮವು ಜು.7 ರಂದು ಬಪ್ಪಳಿಗೆ-ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸಭಾಭವನದಲ್ಲಿ ಜರಗಲಿದೆ.

ಬೆಳಿಗ್ಗೆ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘದ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿರವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಯುವವಾಹಿನಿ ಪುತ್ತೂರು ಘಟಕದ ಅಧ್ಯಕ್ಷ ಜಯರಾಮ ಬಿ.ಎನ್ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಬಾಕಿಲಗುತ್ತು ಶ್ರೀ ಉಳ್ಳಾಲ್ತಿ ವೈದ್ಯನಾಥೇಶ್ವರ ಹೊಸಮ್ಮ ಬ್ರಹ್ಮ ಬೈದರ್ಕಳ ಗರಡಿ ಪರಿವಾರ ದೈವಗಳ ಆಡಳಿತ ಟ್ರಸ್ಟ್ ಅಧ್ಯಕ್ಷ ವಸಂತ ಪೂಜಾರಿ ಬಾಕಿಲಗುತ್ತು ಭಾಗವಹಿಸಲಿದ್ದಾರೆ. ಮಧ್ಯಾಹ್ನ ನಡೆಯುವ ಸಮಾರೋಪ ಕಾರ್ಯಕ್ರಮದಲ್ಲಿ ಯುವವಾಹಿನಿ ಪುತ್ತೂರು ಘಟಕದ ಅಧ್ಯಕ್ಷ ಜಯರಾಮ ಬಿ.ಎನ್ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘದ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿ, ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಇದರ ಅಧ್ಯಕ್ಷ ಹರೀಶ್ ಕೆ.ಪೂಜಾರಿ, ಉಪ್ಪಿನಂಗಡಿ ಅದ್ವಿಕ್ ಮಲ್ಟಿಸ್ಪೆಷಾಲಿಟಿ ಡೆಂಟಲ್ ಕ್ಲಿನಿಕ್‌ನ ಡಾ.ಆಶಿತ್ ಎಂ.ವಿ, ಎಸ್‌ಡಿಸಿಸಿ ಬ್ಯಾಂಕ್ ಬೆಳ್ಳಾರೆ ಶಾಖೆಯ ಶಾಖಾ ವ್ಯವಸ್ಥಾಪಕ ಜಯಂತ್ ಬರಿಮಾರು, ವಧು-ವರಾನ್ವೇಷಣೆ 2024 ಸಂಚಾಲಕ ಉಮೇಶ್ ಬಾಯಾರು, ಯುವವಾಹಿನಿ ಪುತ್ತೂರು ಘಟಕದ ಸಮಾಜ ಸೇವಾ ನಿರ್ದೇಶಕ ಗಣೇಶ್ ಬಿ, ಯುವವಾಹಿನಿ ಪುತ್ತೂರು ಘಟಕದ ಕಾರ್ಯದರ್ಶಿ ಸಮಿತ್ ಪಿ.ರವರು ಭಾಗವಹಿಸಲಿದ್ದಾರೆ.

LEAVE A REPLY

Please enter your comment!
Please enter your name here