ವಿವೇಕಾನಂದ ಸೆಂಟ್ರಲ್ ಸ್ಕೂಲ್ ನಲ್ಲಿ ಶಾಲಾ ಮಂತ್ರಿಮಂಡಲದ ಪ್ರಮಾಣ ವಚನ ಸ್ವೀಕಾರ

0

ಪುತ್ತೂರು: ನೆಹರು ನಗರದ ವಿವೇಕಾನಂದ ಸೆಂಟ್ರಲ್ ಸ್ಕೂಲ್ ನಲ್ಲಿ ಚುನಾಯಿತ ವಿದ್ಯಾರ್ಥಿ ಪರಿಷತ್ ಸದಸ್ಯರ ಪ್ರಮಾಣ ವಚನ ಸ್ವೀಕಾರ ಸಮಾರಂಭವು ಇದೇ ದಿನಾಂಕ 05 -07-2024 ರಂದು ನಡೆಯಿತು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ಶಾಲಾ ಸಂಚಾಲಕರಾದ ಭರತ್ ಪೈ ಅವರನ್ನು ವಾದ್ಯಗಳೊಂದಿಗೆ ಸಾಂಪ್ರದಾಯಿಕವಾಗಿ ಬರಮಾಡಿಕೊಳ್ಳಲಾಯಿತು. ಮಕ್ಕಳನ್ನು ಉದ್ದೇಶಿಸಿ ಮಾತನಾಡುತ್ತಾ ಅವರು ವಿದ್ಯಾರ್ಥಿಗಳು ನಾಯಕತ್ವದ ಗುಣವನ್ನು ಬೆಳೆಸಿಕೊಳ್ಳಬೇಕು. ಅವರಿಗೆ ಅಸಾಧ್ಯವಾದದ್ದು ಯಾವುದು ಇಲ್ಲ ಎಂದು, ಭಾರತದ ಮಾಜಿ ಪ್ರಧಾನಿಗಳಾದ ಲಾಲ್ ಬಹಾದ್ದೂರ್ ಶಾಸ್ತ್ರಿ ಹಾಗೂ ಪ್ರಸ್ತುತ ಪ್ರಧಾನಿಗಳಾಗಿರುವ ನರೇಂದ್ರ ಮೋದಿ ಅವರ ಕೊಡುಗೆಗಳನ್ನು ಸ್ಮರಿಸಿದರು.

ವಿದ್ಯಾರ್ಥಿ ಜೀವನದಲ್ಲಿ ನಿರ್ಧಾರ ಕೈಗೊಳ್ಳುವುದು ಹಾಗೂ ಸಹಾನುಭೂತಿಯಿಂದ ಎಲ್ಲರನ್ನು ಒಟ್ಟುಗೂಡಿಸುವುದು ಇಂತಹ ಚುನಾವಣೆಯನ್ನು ಶಾಲೆಯಲ್ಲಿ ಮಾಡುವುದರಿಂದ ಮಾತ್ರ ಸಾಧ್ಯ ಎಂದು ಹೇಳಿದರು. ಈ ಕಾರ್ಯಕ್ರಮದಲ್ಲಿ ಪ್ರಮಾಣವಚನ ಬೋಧನೆಯನ್ನು ಶಾಲಾ ಪ್ರಾಂಶುಪಾಲರಾದ ಸಿಂಧು ವಿ. ಜಿ ನೆರವೇರಿಸಿ ಕೊಟ್ಟರು.

ಶೈಕ್ಷಣಿಕ ಆಡಳಿತ ಅಧಿಕಾರಿಯಾದ ಅನುರಾಧ ಶಿವರಾಮ್, ಪೋಷಕ ಸಂಘದ ಉಪಾಧ್ಯಕ್ಷರಾದ ನಂದಿನಿ ರೈ ಇವರು ಉಪಸ್ಥಿತರಿದ್ದರು . ಶಾಲಾ ಶಿಕ್ಷಕಿಯರಾದ ಹರಿಣಾಕ್ಷಿ ಮತ್ತು ಲತಾಶಂಕರಿ ಇವರ ಮಾರ್ಗದರ್ಶನದಲ್ಲಿ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು. ಶಾಲಾ ವಿದ್ಯಾರ್ಥಿಗಳಾದ ವೈಶಿಷ್ಟ್ಯ ಸ್ವಾಗತಿಸಿ, ಪೂಜಾಶ್ರೀ ಮತ್ತು ನಿಹಾಲ್ ಇವರು ನಿರೂಪಿಸಿ ಧೃತಿ ಜಿ. ಎಸ್ ಇವರು ಧನ್ಯವಾದ ಸಮರ್ಪಿಸಿದರು. ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮ ಸಂಪನ್ನಗೊಂಡಿತು.

LEAVE A REPLY

Please enter your comment!
Please enter your name here