ಜು.12: ಪುತ್ತೂರು ಕ್ರಿಸ್ತೋಪರ್ ಬಿಲ್ಡಿಂಗ್‌ನಲ್ಲಿ ಪೂಜಾ ಸಾಮಾಗ್ರಿಗಳ ಮಾರಾಟ ಮಳಿಗೆ ಸುಭದ್ರ ಟ್ರೇಡರ‍್ಸ್ ಶುಭಾರಂಭ

0

ಪುತ್ತೂರು: ಪೂಜಾ ಸಾಮಾಗ್ರಿಗಳ ಮಾರಾಟ ಮಳಿಗೆ ಸುಭದ್ರ ಟ್ರೇಡರ‍್ಸ್ ಜು.12 ರಂದು ಬೆಳಿಗ್ಗೆ 10 ಕ್ಕೆ ಪುತ್ತೂರು ಎಪಿಎಂಸಿ ರಸ್ತೆಯ ಸಿಟಿ ಆಸ್ಪತ್ರೆ ಹತ್ತಿರದ ಕ್ರಿಸ್ತೋಪರ್ ಬಿಲ್ಡಿಂಗ್‌ನಲ್ಲಿ ಶುಭಾರಂಭಗೊಳ್ಳಲಿದೆ. ಶ್ರೀ ಮಹಾಗಣಪತಿ ಹವನ ಮತ್ತು ಶ್ರೀ ಲಕ್ಷ್ಮೀ ಪೂಜೆಯೊಂದಿಗೆ ಶುಭಾರಂಭಗೊಳ್ಳುವ ಈ ಕಾರ್ಯಕ್ರಮದಲ್ಲಿ ಜ್ಯೋತಿಷಿ ಬಾಲಕೃಷ್ಣ ಆಚಾರ್ಯ ಕಾರಿಂಜ, ಶಾಸಕ ಅಶೋಕ್ ಕುಮಾರ್ ರೈ, ಮಾಜಿ ಶಾಸಕ ಸಂಜೀವ ಮಠಂದೂರು, ಶ್ರೀ ಕ್ಷೇತ್ರ ಹನುಮಗಿರಿಯ ಧರ್ಮದರ್ಶಿ ನನ್ಯ ಅಚ್ಯುತ ಮೂಡೆತ್ತಾಯ, ಪುತ್ತೂರು ಶ್ರೀ ರಾಮಕೃಷ್ಣ ಪ್ರೌಢ ಶಾಲೆಯ ಸಂಚಾಲಕ ಕಾವು ಹೇಮನಾಥ ಶೆಟ್ಟಿ, ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರ ಎನ್.ಕೆ ಜಗನ್ನೀವಾಸ ರಾವ್, ವಕೀಲರಾದ ಚಿದಾನಂದ ಬೈಲಾಡಿರವರುಗಳು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಬಂಧು ಮಿತ್ರರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಪ್ರೋತ್ಸಾಹ ನೀಡಬೇಕಾಗಿ ಮಾಲಕರಾದ ಶೇಷಪ್ಪ ಗೌಡ ನೀರ್ಕಜೆ, ಭರತ್ ಗೌಡ ನೀರ್ಕಜೆರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಮೊ. 8861458434 ಅಥವಾ 8310097355 ಗೆ ಸಂಪರ್ಕಿಸಬಹುದಾಗಿದೆ.

LEAVE A REPLY

Please enter your comment!
Please enter your name here