ಪುತ್ತೂರು: ಕಾಂಗ್ರೆಸ್ ಕಾರ್ಯಕರ್ತ ಚಂದ್ರಶೇಖರ್ ಬಪ್ಪಳಿಗೆ ಅನಾರೋಗ್ಯಕ್ಕೊಳಗಾಗಿ ನಿಧನರಾದರು. ಬಪ್ಪಳಿಗೆಯ ಸಿಂಗಾಣಿ ನಿವಾಸಿಯಾದ ಚಂದ್ರಶೇಖರ್ ನಿನ್ನೆ ಅಸೌಖ್ಯಕ್ಕೊಳಗಾದ ಕಾರಣ ಪುತ್ತೂರಿನ ಸರ್ಕಾರಿ ಆಸ್ಪತ್ರೆ ದಾಖಲು ಮಾಡಲಾಗಿತ್ತು. ಆ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ ಗೆ ದಾಖಲು ಮಾಡಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.
ಕಾಂಗ್ರೆಸ್ ಕಾರ್ಯಕರ್ತರಾಗಿ , ಒಬ್ಬ ಉತ್ತಮ ಕ್ರಿಕೇಟ್ ಪಟುವಾಗಿ ಗುರುತಿಸಿಕೊಂಡಿದ್ದ ಚಂದ್ರಶೇಖರ್ ಪತ್ನಿ, ತಂದೆ ಹಾಗೂ ಇಬ್ಬರು ಸಹೋದರರನ್ನು ಹಾಗೂ ಬಂಧುಬಳವನ್ನು ಅಗಲಿದ್ದಾರೆ.