ಎಡಮಂಗಲ ಎಕ್ಸ್ಪ್ರೆಸ್ ರೈಲುಗಳ ನಿಲುಗಡೆ ಹಾಗೂ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸಂಸದ ಕ್ಯಾ| ಬ್ರಿಜೇಶ್ ಚೌಟರಿಗೆ ಮನವಿ

0

ಬೇಡಿಕೆ ಈಡೇರಿಸುವ ಭರವಸೆ ನೀಡಿದ ಸಂಸದ ಬ್ರಿಜೇಶ್ ಚೌಟ

ಕಾಣಿಯೂರು : ಮಂಗಳೂರು ಸುಬ್ರಹ್ಮಣ್ಯ ಮಧ್ಯೆ ಪ್ರಯಾಣಿಕರಿಗೆ ಅನುಕೂಲ ವಾಗುವಂತೆ ಸಂಜೆ ಮತ್ತು ಬೆಳಗ್ಗೆ ಪ್ಯಾಸೆಂಜರ್ ರೈಲು ಸಂಚರಿಸಲು ಕ್ರಮ ಕೈಗೊಳ್ಳುವ ಬಗ್ಗೆ , ಮತ್ತು ಎಡಮಂಗಲದಲ್ಲಿ ಎಲ್ ಸಿ ನಂ 70 ದೇವಸ್ಥಾನದ ಹತ್ತಿರ ರೈಲ್ವೆ ಮೇಲ್ ಸೇತುವೆ ನಿರ್ಮಾಣ ಮಾಡಬೇಕೆಂದು ಹಾಗೂ ಎಲ್ಲಾ ಎಕ್ಸ್ಪ್ರೆಸ್ ರೈಲುಗಳು ಎಡಮಂಗಲದಲ್ಲಿ ನಿಲುಗಡೆ ಆಗಬೇಕು ಎಂದು ಎಡಮಂಗಲ ಗ್ರಾಮ ಪಂಚಾಯತ್ ಅಧ್ಯಕ್ಷ ರಾಮಣ್ಣ ಜಾಲ್ತಾರು, ನಿಕಟಪೂರ್ವ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ, ಮೀನುಗಾರಿಕಾ ನಿಗಮದ ಮಾಜಿ ಅಧ್ಯಕ್ಷ ಎ ವಿ ತೀರ್ಥರಾಮ, ಸುಳ್ಯ ಮಂಡಲ ಅಧ್ಯಕ್ಷ ವೆಂಕಟ ವಳಲಂಬೆ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ರಾಕೇಶ್ ರೈ ಕೆಡೆಂಜಿ, ಮಂಡಲ ಪ್ರಧಾನ ಕಾರ್ಯದರ್ಶಿ ವಿನಯ್ ಕಂದಡ್ಕ, ಸವಣೂರು ಮಹಾ ಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಜಯಪ್ರಕಾಶ್ ಲೆಕ್ಕೆಸಿರಿ ಮಜಲು, ಗ್ರಾಮ ಪಂಚಾಯತ್ ಸದಸ್ಯರಾದ ಗೀತಾ ಬಲ್ಕಾಡಿ, ವನಿತಾ ಕಾಯಿತ್ತಿಮಾರ್, ಸುಮಾ ನೂಚಿಲ ಇವರ ಸಮ್ಮುಖದಲ್ಲಿ ಮಾನ್ಯ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟರಿಗೆ ಮನವಿಯನ್ನು ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಾನ್ಯ ಸಂಸದರಿಂದ ಸಕಾರಾತ್ಮಕ ಸ್ಪಂದನೆ ದೊರೆತಿದ್ದು ಮುಂದಿನ ದಿನಗಳಲ್ಲಿ ಸಂಬಂಧ ಪಟ್ಟ ರೈಲ್ವೆ ಸಚಿವರ ಜೊತೆ ಚರ್ಚಿಸಿ ಬೇಡಿಕೆಯನ್ನು ಶೀಘ್ರದಲ್ಲಿ ನೆರವೇರಿಸುವ ಭರವಸೆಯನ್ನು ನೀಡಿರುತ್ತಾರೆ.

LEAVE A REPLY

Please enter your comment!
Please enter your name here