ತಾ|ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸುಂದರ ಗೌಡ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿಯಾಗಿ ರಾಮನಗರ ಜಿಲ್ಲೆಗೆ ವರ್ಗಾವಣೆ

0

ಪುತ್ತೂರು: ಪುತ್ತೂರು ತಾಲೂಕಿನಲ್ಲಿ  ಗ್ರೂಪ್ ‘ಬಿ’ ಹುದ್ದೆಯಾದ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಸುಂದರ ಗೌಡರವರು ಇದೀಗ ಗ್ರೂಪ್ ‘ಎ’ ಹುದ್ದೆಯಾದ  ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿಯಾಗಿ ಮುಂಭಡ್ತಿಗೊಂಡು ರಾಮನಗರ ಜಿಲ್ಲೆಗೆ ವರ್ಗಾವಣೆಗೊಂಡು ಆದೇಶ ಹೊರಡಿಸಲಾಗಿದೆ.

ಸುಂದರ ಗೌಡರವರು ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಕಛೇರಿಯಲ್ಲಿ 10 ವರ್ಷ, ಶಿವರಾಮ ಕಾರಂತ ಪ್ರೌಢಶಾಲೆಯಲ್ಲಿ 11 ವರ್ಷ, ಅಜ್ಜಾವರ ಪ್ರೌಢಶಾಲೆಯಲ್ಲಿ 9 ವರ್ಷ ಸೇವೆ ಸಲ್ಲಿಸಿರುತ್ತಾರೆ. ಇವರು ತಮ್ಮ ಬಿಪಿಎಡ್ ಶಿಕ್ಷಣದಲ್ಲಿ ಮೂರನೇ, ಎಂಪಿಎಡ್ ಶಿಕ್ಷಣದಲ್ಲಿ ಎರಡನೇ ರ್ಯಾಂಕ್ ಗಳಿಸಿರುತ್ತಾರೆ‌. ಸುಂದರ ಗೌಡರವರು ಪುತ್ತೂರಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ರಾಜ್ಯ ಮಟ್ಟದ ಅಥ್ಲೆಟಿಕ್ಸ್ ಹಾಗೂ ಕರಾಟೆ ಕ್ರೀಡೆಯನ್ನು ಯಶಸ್ವಿಯಾಗಿ ಸಂಘಟಿಸಿದ್ದರು. ಪ್ರಸ್ತುತ ಇವರು ಪತ್ನಿ ಕಬಕ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿ ಪಾರ್ವತಿ, ಪುತ್ರರಾದ ಬಿಇ ಪದವಿ ಹೊಂದಿರುವ ಅಭಿಲಾಶ್, ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ ಅವನೀಶ್ ರವರೊಂದಿಗೆ ಮಿತ್ತೂರು ಸೂರ್ಯ ಎಂಬಲ್ಲಿ ವಾಸ್ತವ್ಯ ಹೊಂದಿದ್ದಾರೆ.

LEAVE A REPLY

Please enter your comment!
Please enter your name here