ಬೊಳುವಾರು ಕ್ಷೇತ್ರದಲ್ಲಿ ಆಟಿ ತಿಂಗಳ ವಿಶೇಷ ಪೂಜೆ, ಆಮಂತ್ರಣ ಪತ್ರ ಬಿಡುಗಡೆ

0

ಪುತ್ತೂರು: ಬೊಳುವಾರು ಶ್ರೀ ದುರ್ಗಾಪರಮೇಶ್ವರೀ ಉಳ್ಳಾಳ್ತಿ ಮಲರಾಯ ಸಪರಿವಾರ ಕ್ಷೇತ್ರದಲ್ಲಿ ಆಶಾಢ ಮಾಸ ಆಟಿ ತಿಂಗಳ ಪ್ರಯುಕ್ತ ಕ್ಷೇತ್ರದಲ್ಲಿ ನಡೆಯುವ ವಿಶೇಷ ದುರ್ಗಾಪೂಜೆಯ ಆಮಂತ್ರಣ ಪತ್ರ ಬಿಡುಗಡೆ ಜು.11ರಂದು ಬೆಳಿಗ್ಗೆ ಕ್ಷೇತ್ರದಲ್ಲಿ ನಡೆಯಿತು.
ಜು.16ರಿಂದ ಆ.16ರ ವರೆಗೆ ರಾತ್ರಿ ಶ್ರೀ ದೇವರಿಗೆ ಕಲ್ಪೋಕ್ತ ಸಹಿತ ವಿಶೇಷ ದುರ್ಗಾಪೂಜೆ ಹಾಗೂ ಸರ್ವಾಲಂಕಾರ ಸಹಿತ ವಿಶೇಷ ದುರ್ಗಾಪೂಜೆ ನಡೆಯಲಿದೆ. ಅ.9ರಂದು ನಾಗರ ಪಂಚಮಿ, ಅ.16ರಂದು ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ ನಡೆಯಲಿದೆ.
ಕ್ಷೇತ್ರದ ಅರ್ಚಕ ಮನಮೋಹನ್ ಭಟ್, ಕ್ಷೇತ್ರ ಪವಿತ್ರಪಾಣಿ ಬಾಲಸುಬ್ರಹ್ಮಣ್ಯ ಭಟ್, ವಿಶ್ವಸ್ಥ ಮಂಡಳಿ ಅಧ್ಯಕ್ಷ ಪ್ರವೀಣ್ ನಾಯಕ್, ಕಾರ್ಯದರ್ಶಿ ವಿ.ಕೆ. ಶೆಟ್ಟಿ, ಕೋಶಾಧಿಕಾರಿ ಪ್ರಸನ್ನ ಬಲ್ಲಾಳ್, ಟ್ರಸ್ಟಿ ಸುಂದರ ನಾಯ್ಕ, ಜಲಜಾಕ್ಷಿ ಹೆಗ್ಡೆ, ಶಂಕರ ಮಲ್ಯ, ಸೀಮಂತ್‌ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here