ಜು 13: ಚಾರ್ವಾಕ ಪ್ರಾ. ಕೃ.ಪ.ಸ ಸಂಘದ ವತಿಯಿಂದ ಅಡಿಕೆ ಕೃಷಿ ಮಾಹಿತಿ ಕಾರ್ಯಕ್ರಮ

0

ಕಾಣಿಯೂರು: ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಕಾಣಿಯೂರು ಇದರ ಶತಮಾನೋತ್ಸವದ ಪ್ರಯುಕ್ತ ಸಂಘದ ಕಾರ್ಯವ್ಯಾಪ್ತಿಯ ಕೃಷಿಕ ಸದಸ್ಯರಿಗೆ ಅಡಿಕೆ ಕೃಷಿ ಮಾಹಿತಿ ಕಾರ್ಯಕ್ರಮವು ಜು 13ರಂದು ಮಧ್ಯಾಹ್ನ ಚಾರ್ವಾಕ ಶ್ರೀ ಕಪಿಲೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆಯಲಿದೆ.
ಸಂಘದ ಅಧ್ಯಕ್ಷರಾದ ಗಣೇಶ್ ಉದನಡ್ಕರವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ರಾಷ್ಟ್ರ ಮಟ್ಟದ ಕೃಷಿ ಪ್ರಶಸ್ತಿ ಪುರಸ್ಕೃತ ಪ್ರಭಾಕರ ಮಯ್ಯ ಸೂರ್ಯ ಬೆಳ್ತಂಗಡಿರವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಲಿದ್ದಾರೆ ಎಂದು ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಅಶೋಕ್ ಗೌಡ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here