ರೆಂಜಲಾಡಿ: ಎಸ್ಕೆಎಸ್ಸೆಸ್ಸೆಫ್ ವತಿಯಿಂದ ಮಾದಕ ವ್ಯಸನದ ವಿರುದ್ಧ ಜನಜಾಗೃತಿ

0

ಪುತ್ತೂರು: ಮಾದಕ ವ್ಯಸನದ ವಿರುದ್ಧ ಎಸ್ಕೆಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ವತಿಯಿಂದ ಜೂ.26ರಿಂದ ಆ.10ರ ವರೆಗೆ ಹಮ್ಮಿಕೊಂಡಿರುವ ಜನ ಜಾಗೃತಿ ಅಭಿಯಾನದ ಅಂಗವಾಗಿ ಎಸ್ಕೆಎಸ್ಸೆಸ್ಸೆಫ್ ರೆಂಜಲಾಡಿ ಶಾಖೆ ವತಿಯಿಂದ ಜು.10ರಂದು ರೆಂಜಲಾಡಿ ಮಸೀದಿ ವಠಾರದಲ್ಲಿ ಪೋಸ್ಟರ್ ಪ್ರದರ್ಶನ ನಡೆಯಿತು.

ರೆಂಜಲಾಡಿ ಮಸೀದಿಯ ಖತೀಬ್ ನಾಸಿರ್ ಫೈಝಿ, ಸದರ್ ಅಬೂಬಕ್ಕರ್ ಮುಸ್ಲಿಯಾರ್, ಎಸ್ಕೆಎಸ್ಸೆಸ್ಸೆಫ್ ರೆಂಜಲಾಡಿ ಶಾಖೆಯ ಅಧ್ಯಕ್ಷ ಅಬ್ದುಲ್ ಅಝೀಝ್ ರೆಂಜಲಾಡಿ, ಜಮಾಅತ್ ಪ್ರ.ಕಾರ್ಯದರ್ಶಿ ಝೈನುದ್ದೀನ್ ಹಾಜಿ ಜೆ.ಎಸ್, ಆದರ್ಶ ಸೇವಾ ಸಂಘದ ಅಧ್ಯಕ್ಷ ಇಮ್ರಾನ್ ಮಲ್ನಾಡ್, ಫಾರೂಕ್ ರೆಂಜಲಾಡಿ, ಆಸಿಫ್ ರೆಂಜಲಾಡಿ, ರಝಾಕ್ ಪರಾಡ್ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here