ಜು.14: ಪರಿವಾರ ಬಂಟರ ಸಂಘದಿಂದ ಕೆಸರ್ಡ್ ಒಂಜಿ ದಿನ

0

ಪುತ್ತೂರು:ಪರಿವಾರ ಬಂಟರ ಸಂಘ ಪುತ್ತೂರು ವಲಯ, ಮಹಿಳಾ ವೇದಿಕೆ ಮತ್ತು ಯುವ ಪರಿವಾರ ಬಂಟರ ವೇದಿಕೆ ಪುತ್ತೂರು ವಲಯದ ಸಹಭಾಗಿತ್ವದಲ್ಲಿ ಜು.14ರಂದು ಬೆಳಿಗ್ಗೆ 9 ರಿಂದ ಕೆಸರ್ಡ್ ಒಂಜಿ ದಿನ ಕಾರ್ಯಕ್ರಮ ಪುತ್ತೂರು ತೆಂಕಿಲ ಕೊಟ್ಟಿಬೆಟ್ಟು ಏಳ್ನಾಡ್‌ಗುತ್ತು ತರವಾಡಿನ ಸಮೀಪದ ಶಶಿಧರ್ ನಾಯ್ಕ್ ರವರ ಗದ್ದೆಯಲ್ಲಿ ನಡೆಯಲಿದೆ.


ಕಾರ್ಯಕ್ರಮವನ್ನು ಪರಿವಾರ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿಯ ನಿರ್ದೇಶಕರಾದ ರತ್ನಾಕರ ನಾಯ್ಕ್ ಉದ್ಘಾಟಿಸಲಿದ್ದು, ಪರಿವಾರ ಬಂಟರ ಸಂಘದ ಕೇಂದ್ರ ಸಮಿತಿಯ ಅಧ್ಯಕ್ಷರಾದ ಸಂತೋಷ್ ಕುಮಾರ್ ಎ., ಬಡಕೋಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ನಮಿತಾ ಎಸ್. ನಾಯ್ಕ್, ವಕೀಲರಾದ ತೇಜಸ್ ನಾಯ್ಕ್ , ಕೆಸರು ಗದ್ದೆಗೆ ಸ್ಥಳಾವಕಾಶ ಒದಗಿಸಿದ ಶಶಿಧರ್ ನಾಯ್ಕ್ ರವರು ಉಪಸ್ಥಿತರಿರುವರು ಎಂದು ಸಂಘದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here