ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭದ್ರತಾ ಸಿಬ್ಬಂದಿಗಳಿಗೆ ಮಾಹಿತಿ ಕಾರ್ಯಾಗಾರ

0

ಕಾಣಿಯೂರು: ಕಡಬ ತಾಲೂಕಿನ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಭದ್ರತಾ ಸಿಬ್ಬಂದಿಗಳಿಗೆ ಶಿಸ್ತು ಮತ್ತು ಜವಾಬ್ದಾರಿ ಮತ್ತಿತರ ವಿಷಯದ ಬಗ್ಗೆ ಮಾಹಿತಿ ಕಾರ್ಯಾಗಾರವು ಜು 11ರಂದು ನಡೆಯಿತು. ಪುತ್ತೂರು ಸಹಾಯಕ ಆಯುಕ್ತರು, ದೇವಾಲಯದ ಆಡಳಿತಾಧಿಕಾರಿ ಜುಬಿನ್ ಮೊಹಾಪಾತ್ರ ಪ್ರಾಸ್ತಾವಿಕವಾಗಿ ಮಾತನಾಡಿದರು. ಸುಬ್ರಹ್ಮಣ್ಯ ಪೊಲೀಸ್ ಠಾಣೆಯ ಎಸ್ ಐ ಕಾರ್ತಿಕ್ ಕಾರ್ಯಾಗಾರ ನಡೆಸಿಕೊಟ್ಟರು. ವೇದಿಕೆಯಲ್ಲಿ ಸಹಾಯಕ ಕಾರ್ಯನಿರ್ವಾಹಣಾಧಿಕಾರಿ ಯೇಸುರಾಯ್, ಭದ್ರತಾ ಸಿಬ್ಬಂದಿಗಳ ಮೇಲ್ವಿಚಾರಕ ಮೋನಪ್ಪ ಉಪಸ್ಥಿತರಿದ್ದರು. ಸಿಬ್ಬಂದಿ ಯೋಗೀಶ್ ಕಾರ್ಯಕ್ರಮ ನಿರ್ವಹಿಸಿದರು.

LEAVE A REPLY

Please enter your comment!
Please enter your name here