ನಾಳೆ(ಜು.13): ಪೆರ್ಲಂಪಾಡಿ ಶಾಲೆಯಲ್ಲಿ ಭೋಜನಾಲಯ, ಸಭಾ ಭವನ ಉದ್ಘಾಟನೆ

0

ಪುತ್ತೂರು: ದ.ಕ ಜಿ.ಪಂ.ಸ.ಹಿ.ಪ್ರಾ.ಶಾಲೆ ಪೆರ್ಲಂಪಾಡಿ, ಶಾಲಾಭಿವೃದ್ಧಿ ಸಮಿತಿ ಹಾಗೂ ಹಿರಿಯ ವಿದ್ಯಾರ್ಥಿ ಸಂಘ ಇದರ ಆಶ್ರಯದಲ್ಲಿ ಶಾಲಾ ಭೊಜನಾಲಯ ಮತ್ತು ಎಂ.ಆರ್.ಪಿ.ಎಲ್ ಅನುದಾನದಲ್ಲಿ ನವೀಕೃತ ಸಭಾಭವನದ ಉದ್ಘಾಟನೆ ಜು.13 ರಂದು ಬೆಳಿಗ್ಗೆ ಪೆರ್ಲಂಪಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ.

ಭೋಜನಾಲಯ ಮತ್ತು ಸಭಾಂಗಣದ ಉದ್ಘಾಟನೆಯನ್ನು ಶಾಸಕ ಅಶೋಕ್ ಕುಮಾರ್ ರೈ ಉದ್ಘಾಟಿಸಲಿದ್ದು ಕೊಳ್ತಿಗೆ ಗ್ರಾಪಂ ಅಧ್ಯಕ್ಷೆ ಅಕ್ಕಮ್ಮ ಸಭಾಧ್ಯಕ್ಷತೆ ವಹಿಸಲಿದ್ದಾರೆ. ಅತಿಥಿಗಳಾಗಿ ಕೊಳ್ತಿಗೆ ಗ್ರಾಪಂ ಉಪಾಧ್ಯಕ್ಷ ಪ್ರಮೋದ್ ಕೆ.ಎಸ್, ಸದಸ್ಯೆ ಯಶೋಧ ಬಾಬು ರಾಜೇಂದ್ರ, ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್, ಎಂಆರ್‌ಪಿಎಲ್‌ನ ಜಿಜಿಎಂ ಎಚ್‌ಆರ್ ಕೃಷ್ಣಯ್ಯ ಹೆಗ್ಡೆ, ಗ್ರಾಮಾಭಿವೃದ್ದಿ ಯೋಜನೆಯ ಜಿಲ್ಲಾ ನಿರ್ದೇಶಕ ಪ್ರವೀಣ್ ಕುಮಾರ್ ಭಾಗವಹಿಸಲಿದ್ದಾರೆ. ಶಿಕ್ಷಣ ಪ್ರೇಮಿಗಳು, ಗ್ರಾಮಸ್ಥರು, ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಪೆರ್ಲಂಪಾಡಿ ಎಸ್‌ಡಿಎಂಸಿ ಅಧ್ಯಕ್ಷ ಲೋಕೇಶ್ ಪೆರ್ಲಂಪಾಡಿ ಹಾಗೂ ಸದಸ್ಯರುಗಳು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಲಕ್ಷ್ಮಣ ನಾಯ್ಕ್ ಮತ್ತು ಸದಸ್ಯರು, ಪ್ರಭಾರ ಮುಖ್ಯಗುರು ಭವಾನಿ ಎಂ ಹಾಗೂ ಶಿಕ್ಷಕ ವೃಂದ, ವಿದ್ಯಾರ್ಥಿ ವೃಂದ, ಅಡುಗೆ ಸಿಬ್ಬಂದಿಗಳ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here