ಪುತ್ತೂರು ತೆಂಕಿಲ ಬೈಪಾಸ್ ರಸ್ತೆಯಲ್ಲಿ ಬಿದ್ದ ಮರ –  ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಸಂಚಾರ ಸ್ಥಗಿತ

0

ಪುತ್ತೂರು: ತೆಂಕಿಲ ಬೈಪಾಸ್ ರಸ್ತೆಯಲ್ಲಿ ಬೃಹತ್ ಗಾತ್ರದ ಮರವೊಂದು ಬಿದ್ದ ಘಟನೆ ಜು.13 ರ ಬೆಳಗ್ಗೆ ನಡೆದಿದೆ. ಘಟನೆಯಿಂದ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಸಂಚಾರ ಸ್ಥಗಿತಗೊಂಡಿದೆ.

ತೆಂಕಿಲ ಬೈಪಾಸ್ ರಸ್ತೆಯ ವಿವೇಕಾನಂದ ಶಾಲಾ ಕ್ಯಾಂಪಸ್ ಬಳಿ ಕಿರು ಸೇತುವೆ ಬಳಿ ಮರ ಬಿದ್ದಿದೆ. ರಸ್ತೆಗೆ ಅಡ್ಡವಾಗಿ ಮರ ಬಿದ್ದ ಪರಿಣಾಮ ವಾಹನ ಸಂಚಾರಕ್ಕೆ  ತೊಡಕಾಗಿದೆ.

ಬದಲಿ ರಸ್ತೆಯಾಗಿ ಪುತ್ತೂರು ಪೇಟೆಯ ಮೂಲಕ ಮಂಗಳೂರು ಮತ್ತು ಸುಳ್ಯ ರಸ್ತೆಯನ್ನು ಸಂಪರ್ಕಿಸಬಹುದು.

LEAVE A REPLY

Please enter your comment!
Please enter your name here