ಸುಬ್ರಹ್ಮಣ್ಯ: ಮೆಸ್ಕಾಂ ಕಛೇರಿಯಿಂದ ಬ್ಯಾಟರಿ ಕಳವು- ಕಳ್ಳರ ಬಂಧನ- ಕೃತ್ಯಕ್ಕೆ ಬಳಸಿದ ಗೂಡ್ಸ್‌ ವಾಹನ ವಶಕ್ಕೆ

0

ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ಮೆಸ್ಕಾಂ ನ ವಿದ್ಯುತ್ ವಿತರಣ ಕೇಂದ್ರದಲ್ಲಿ ಮಾರ್ಚ್ ತಿಂಗಳಿನಲ್ಲಿ 8 ಬ್ಯಾಟರಿಗಳು ಕಳ್ಳತನವಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ವೆಂಕಟೇಶ್‌ ಎಂಬಾತನನ್ನು ಬಂಧಿಸಿ ಆತನಿಂದ ಹಣ ಹಾಗೂ ಬ್ಯಾಟರಿ ವಶಪಡಿಸಿಕೊಳ್ಳಲಾಗಿತ್ತು.

ಇನ್ನೊಬ್ಬ ಆರೋಪಿಯಾದ ಮುತ್ತುಮಣಿ ಎಂಬಾತನನ್ನು ಮಂಗಳೂರಿನಲ್ಲಿ ಅರೆಸ್ಟ್ ಮಾಡಿ ಆತನಿಂದ ಕೃತ್ಯಕ್ಕೆ ಬಳಕೆಯಾದ KA19 AC 7392 ಗೂಡ್ಸ್‌ ವಾಹನ ವಶಕ್ಕೆ ಪಡೆಯಲಾಗಿದೆ. ಆರೋಪಿಗಳು ವಿಟ್ಲ ಹಾಗೂ ಸುಳ್ಯ ವ್ಯಾಪ್ತಿಯಲ್ಲಿ ಕೈ ಚಳಕ ತೋರಿಸಿರುವುದಾಗಿದೆ ಎಂದು ತಿಳಿದು ಬಂದಿದೆ.

ಆರೋಪಿ ಪತ್ತೆಯಲ್ಲಿ ಇನ್ಸ್ ಪೆಕ್ಟರ್ ಸತೀಶ್ ಹಾಗೂ ಸುಬ್ರಮಣ್ಯ ಠಾಣಾ ಎಸ್ ಐ ಕಾರ್ತಿಕ್, ಎಸ್ ಐ ಮಹೇಶ ಪಿ ಹಾಗೂ ಅಪರಾಧ ಸಿಬ್ಬಂದಿಯಾದ ಮಹೇಶ್ ಹಾಗೂ ಆಕಾಶ್ ರವರು ಪ್ರಮುಖ ಪಾತ್ರವಹಿಸಿರುತ್ತಾರೆ. ಎ ಎಸ್ ಐ ಕರುಣಾಕರ, ಸಂಧ್ಯಾ, ವಿಠಲ್ ಕಾರ್ಯನಿರ್ವಹಿಸಿದ್ದಾರೆ.

LEAVE A REPLY

Please enter your comment!
Please enter your name here