ಕಾಂಕ್ರೀಟೀಕರಣಗೊಳಿಸಿದ ಪರಣೆ – ಅಮೈ ರಸ್ತೆಯ ಉದ್ಘಾಟನೆ

0

ಪುತ್ತೂರು : ಸವಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾಲ್ತಾಡಿ ಗ್ರಾಮದ ಮತ್ತು ಬೆಳಂದೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕುದ್ಮಾರು ಗ್ರಾಮಕ್ಕೆ ಒಳಪಡುವ ರಸ್ತೆಯಾದ ಪರಣೆ -ಅಮೈ ರಸ್ತೆಯು ಶಾಸಕರ ಮತ್ತು ಬೆಳಂದೂರು ಗ್ರಾಮ ಪಂಚಾಯತ್ ಅನುದಾನದಲ್ಲಿ ಕಾಂಕ್ರೀಟೀಕರಣಗೊಂಡು ಉದ್ಘಾಟಿಸಲಾಯಿತು.

ಶಾಸಕಿ ಕುಮಾರಿ ಭಾಗೀರಥಿ ಮುರುಳ್ಯ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ ನೀಡಿ ಶುಭ ಹಾರೈಸಿದರು.ಬಿ ಜೆ ಪಿ ಜಿಲ್ಲಾ ಸಮಿತಿ ಉಪಾಧ್ಯಕ್ಷ ರಾಕೇಶ್ ರೈ ಕೆಡೆಂಜಿ, ಮಂಡಲ ಎಸ್. ಟಿ ಮೋರ್ಚಾ ಅಧ್ಯಕ್ಷ ಗಂಗಾಧರ್ ಪೆರಿಯಡ್ಕ ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆ ಇಂದಿರಾ. ಬಿ ಕೆ, ಮಹಾಶಕ್ತಿ ಕೇಂದ್ರದ ಅಧ್ಯಕ್ಷ ತಾರಾನಾಥ ಕಾಯರ್ಗ, ಎ ಪಿ. ಎಮ್ ಸಿ ಮಾಜಿ ಅಧ್ಯಕ್ಷ ದಿನೇಶ್ ಮೆದು, ಸವಣೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಂದರಿ ಬಿ ಎಸ್ ಬೆಳಂದೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಪಾರ್ವತಿ, ಬೆಳಂದೂರು ಉಪಾಧ್ಯಕ್ಷ ಜಯಂತ್ ಅಭೀರ, ಮಾಜಿ ಅಧ್ಯಕ್ಷೆ ನಿರ್ಮಲ ಕೇಶವ ಗೌಡ,ಸವಣೂರು ಮತ್ತು ಬೆಳಂದೂರು ಗ್ರಾಮ ಪಂಚಾಯತ್ ಸದಸ್ಯರುಗಳು,ಗುತ್ತಿಗೆದಾರರು, ಬಿ ಜೆ ಪಿ ಕಾರ್ಯಕರ್ತರು, ರಸ್ತೆಯ ಫಲನುಭವಿಗಳು,ಊರವರು ಮುಂತಾದವರ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯಿತು. ಪಾಲ್ತಾಡಿ ಬೂತ್ ಸಂಖ್ಯೆ 70 ರ ಅಧ್ಯಕ್ಷ ಅನ್ನಪೂರ್ಣ ಪ್ರಸಾದ್ ಬೈಲಾಡಿ ಸ್ವಾಗತಿಸಿ, ಪಂಚಾಯತ್ ಸದಸ್ಯ ಸತೀಶ್ ಅಂಗಡಿಮೂಲೆ ವಂದಿಸಿದರು.

LEAVE A REPLY

Please enter your comment!
Please enter your name here