ಮಾಡಾವು: ಬೊಳಿಕ್ಕಳ ಶಾಲೆಯಲ್ಲಿ ಎಂ.ಆರ್.ಪಿ.ಎಲ್ ಕೊಡುಗೆಯ ಶೌಚಾಲಯ ಕಟ್ಟಡ ಉದ್ಘಾಟನೆ

0

ಪುತ್ತೂರು: ಕೆಯ್ಯೂರು ಗ್ರಾಮದ ಬೊಳಿಕ್ಕಳ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜು.12 ರಂದು ಎಂ.ಆರ್.ಪಿ.ಎಲ್ ವತಿಯಿಂದ ನಿರ್ಮಾಣಗೊಂಡ ಶೌಚಾಲಯ ಕಟ್ಟಡದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಎಂ.ಆರ್.ಪಿ.ಎಲ್ ಸಂಸ್ಥೆಯ ಪವರ್ ಪ್ಲಾಂಟ್ ವಿಭಾಗದ ಹರೀಶ್ ಶೆಟ್ಟಿಯವರು ನೆರವೇರಿಸಿಕೊಟ್ಟರು.

ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಉದ್ಘಾಟನಾ ಭಾಷಣ ಮಾಡಿದ ಅವರು ಸರಕಾರಿ ಸಂಸ್ಥೆಗಳ ಮಕ್ಕಳಲ್ಲಿ ಸ್ವಚ್ಛತೆಯ ಅರಿವನ್ನು ಮೂಡಿಸುವ ನಿಟ್ಟಿನಲ್ಲಿ ನಮ್ಮ ಸಂಸ್ಥೆಯ ವತಿಯಿಂದ ನೀಡುತ್ತಿರುವ ಕೊಡುಗೆ ಇದಾಗಿದೆ ಎಂದು ತಿಳಿಸಿದರು. ಸರಕಾರಿ ಶಾಲೆಗಳು ಅಭಿವೃದ್ಧಿಯನ್ನು ಹೊಂದುವಲ್ಲಿ ನಾವೆಲ್ಲರೂ ಕೈ ಜೋಡಿಸಬೇಕಾಗಿದೆ ಎಂದು ಹೇಳಿ ಶುಭ ಹಾರೈಸಿದರು.

ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರಾದ ಸುರೇಶ್ ರೈ ಬಿ.ಕೆಯವರು ಮಾತನಾಡಿ, ಎಂಆರ್‌ಪಿಎಲ್‌ನ ಕೊಡುಗೆಯನ್ನು ಸ್ಮರಿಸಿ ಅವರಿಗೆ ಕೃತಜ್ಞತೆ ಸಲ್ಲಿಸಿದರು. ಮುಖ್ಯ ಅತಿಥಿಗಳಾಗಿ ಕೆಯ್ಯೂರು ಗ್ರಾಮ ಪಂಚಾಯತ್ ಸದಸ್ಯರಾದ ವಿಜಯ ಕುಮಾರ್ ಸಣಂಗಳ , ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ, ಹಾಲಿ ಸದಸ್ಯೆ ಜಯಂತಿ ಎಸ್ ಭಂಡಾರಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸೇವಾಪ್ರತಿನಿಧಿ ರಜನಿರವರುಗಳು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಶಾಲಾ ಮುಖ್ಯಗುರು ಶಶಿಕಲಾ ಎಂರವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಹಶಿಕ್ಷಕಿ ಸೋಮಾವತಿ ಸ್ವಾಗತಿಸಿ, ಶ್ರುತಿ ಕೆ ಎ. ವಂದಿಸಿದರು. ದಿವ್ಯ ರೈ.ಪಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here