ಈಶ್ವರಮಂಗಲ ವಲಯ ಯುವ ಒಕ್ಕಲಿಗ ಗೌಡ ಸೇವಾ ಸಂಘದ ‘ಕಂಡಡೊಂಜಿ ದಿನʼ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

0

ಕಾವು: ಈಶ್ವರಮಂಗಲ ವಲಯ ಯುವ ಒಕ್ಕಲಿಗ ಗೌಡ ಸೇವಾ ಸಂಘ ಇದರ ನೇತೃತ್ವದಲ್ಲಿ ಒಕ್ಕಲಿಗ ಗೌಡ ಸೇವಾ ಸಂಘ ಈಶ್ವರಮಂಗಲ,ಮಹಿಳಾ ಸಂಘ ಮತ್ತು ಒಕ್ಕಲಿಗ ಸ್ವ ಸಹಾಯ ಸಂಘಗಳ ಒಕ್ಕೂಟ ಈಶ್ವರಮಂಗಲ ಇವರ ಸಹಭಾಗಿತ್ವದಲ್ಲಿ ಜು.28ರಂದು ಈಶ್ವರಮಂಗಲ ಮರಕ್ಕಡ ಗದ್ದೆಯಲ್ಲಿ ಮಕ್ಕಳಿಗೆ, ಮಹಿಳೆಯರಿಗೆ, ಪುರುಷರಿಗೆ ವಿವಿಧ ಕ್ರೀಡಾಕೂಟದದೊಂದಿಗೆ ಕಂಡಡೊಂಜಿ ದಿನ ಕಾರ್ಯಕ್ರಮ ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಜು.16 ರಂದು ನಡೆಯಿತು.
ಈ ಸಂದರ್ಭದಲ್ಲಿ ಒಕ್ಕಲಿಗ ಗೌಡ ಸೇವಾ ಸಂಘ ಪುತ್ತೂರು ಇದರ ಪೂರ್ವ ಅಧ್ಯಕ್ಷರಾದ ನಾಗಪ್ಪ ಗೌಡ ಬೊಮ್ಮೆಟ್ಟಿ, ಈಶ್ವರಮಂಗಲ ವಲಯ ಉಸ್ತುವಾರಿ ಲೋಕೇಶ್ ಚಾಕೋಟೆ,ನೆಟ್ಟಣಿಗೆ ಮುಡ್ನೂರು ಗ್ರಾಮ ಸಮಿತಿ ಉಪಾಧ್ಯಕ್ಷ ನವೀನ್ ಗೌಡ ಕುಕ್ಕುಡೇಲು,ಈಶ್ವರಮಂಗಲ ವಲಯ ಯುವ ಒಕ್ಕಲಿಗ ಗೌಡ ಸೇವಾ ಸಂಘದ ಗೌರವಾಧ್ಯಕ್ಷ ಲಿಂಗಪ್ಪ ಗೌಡ ಮೋಡಿಕೆ, ಅಧ್ಯಕ್ಷರಾದ ಜಗ್ಗನಾಥ ಗೌಡ ಪಟ್ಟೆ, ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ಕಾವು, ಉಪಾಧ್ಯಕ್ಷ ಅನಿಲ್ ಕುಮಾರ್ ಕನ್ನಡ್ಕ, ಸಂಘಟನಾ ಕಾರ್ಯದರ್ಶಿ ದೀಪಕ್ ಕುಮಾರ್ ಮುಂಡ್ಯ, ನಾರಾಯಣ ಗೌಡ, ನೆಟ್ಟಣಿಗೆ ಮುಡ್ನೂರು ಒಕ್ಕಲಿಗ ಸ್ವ ಸಹಾಯ ಸಂಘಗಳ ಒಕ್ಕೂಟ ಅಧ್ಯಕ್ಷರಾದ ಕಲಾವತಿ ಎಸ್ ಗೌಡ ಪಟ್ಟಡ್ಕ ಮಹಿಳಾ ಘಟಕದ ಅಧ್ಯಕ್ಷರಾದ ದೇವಿಪ್ರಶಾಂತಿ ಅದ್ದಂತಡ್ಕ, ಮೋಹನಾಂಗಿ ಬಿಜಂತಡ್ಕ,ಸೇವಂತಿ ಮಡ್ಯಲಮಜಲು,ತೇಜಸ್ವಿನಿನವೀನ್ ಗೌಡ, ಒಕ್ಕಲಿಗ ಸ್ವ ಸಹಾಯ ಟ್ರಸ್ಟ ನ ಮೇಲ್ವಿಚಾರಕರಾದ ವಿಜಯಕುಮಾರ್, ಪ್ರೇರಕಾರದ ಚಂದನ್ ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here