ನಗರಸಭೆ ನಾಮನಿರ್ದೇಶಿತ ಸದಸ್ಯನ ವಿರುದ್ದ ಪೌರಾಯುಕ್ತ, ಜಿಲ್ಲಾಧಿಕಾರಿಗೆ ಆಕ್ಷೇಪಣೆ ಸಲ್ಲಿಸಿದ ಬಿಜೆಪಿ ಸದಸ್ಯರು

0

ಪುತ್ತೂರು: ಪುತ್ತೂರು ನಗರಸಭೆಗೆ ನಾಮನಿರ್ದೇಶನದ ಮೂಲಕ ನಾಲ್ವರು ಸದಸ್ಯರನ್ನು ಸರಕಾರ ನೇಮಕಗೊಳಿಸಿ ಆದೇಶ ಹೊರಡಿಸಿದೆ. ಈ ಪೈಕಿ ಕೃಷ್ಣಾ ಫಾರ್ಮ್‌ ಹೌಸ್‌ ಚಿದಾನಂದ ರೈ ಅವರನ್ನು ನಾಮ ನಿರ್ದೇಶನಗೊಳಿಸಿರುವುದರ ವಿರುದ್ದ ಬಿಜೆಪಿ ಸದಸ್ಯರು ಪೌರಾಯುಕ್ತರಿಗೆ ಮತ್ತು ಜಿಲ್ಲಾಧಿಕಾರಿಗೆ ಆಕ್ಷೇಪಣೆ ಸಲ್ಲಿಸಿದ್ದಾರೆ. ಗ್ರಾಮಾಂತರ ಬೂತ್‌ ಸಂಖ್ಯೆ 135ರ ಕ್ರ.ಸಂ.254ರಲ್ಲಿ ಮತದಾನದ ಹಕ್ಕನ್ನು ಹೊಂದಿರುವ ಚಿದಾನಂದ ರೈ ಅವರನ್ನು ನಗರಸಭೆಗೆ ನಾಮನಿರ್ದೇಶನ ಮಾಡಿರುವುದಾಗಿ ಪೌರಾಯುಕ್ತರಿಗೆ ಮತ್ತು ಜಿಲ್ಲಾಧಿಕಾರಿಗೆ ಸಲ್ಲಿಸಲಾದ ಆಕ್ಷೇಪಣಾ ಅರ್ಜಿಯಲ್ಲಿ ತಿಳಿಸಲಾಗಿದೆ.

LEAVE A REPLY

Please enter your comment!
Please enter your name here