ಶಿಥಿಲಗೊಂಡ ಕರ್ನೂರು ಕೋಟಿಗದ್ದೆ ಸೇತುವೆ – ಘನ ವಾಹನಗಳು ಬದಲಿ ರಸ್ತೆಯಲ್ಲಿ ಸಂಚರಿಸಲು ಜಿಲ್ಲಾಧಿಕಾರಿ ಆದೇಶ

0

ಪುತ್ತೂರು: ನೆ.ಮುಡ್ನೂರು ಗ್ರಾಮದ ಕರ್ನೂರು ಕೋಟಿಗದ್ದೆ ಎಂಬಲ್ಲಿರುವ ಸೇತುವೆ ಶಿಥಿಲಗೊಂಡಿರುವ ಹಿನ್ನೆಲೆಯಲ್ಲಿ ಆ ರಸ್ತೆಯಲ್ಲಿ ಘನ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ.ಪಿ ಆದೇಶಿಸಿದ್ದಾರೆ.
ಮುಡುಪಿನಡ್ಕ-ಈಶ್ವರಮಂಗಲ-ಪಂಚೋಡಿ-ಗಾಳಿಮುಖ ಜಿಲ್ಲಾ ಮುಖ್ಯ ರಸ್ತೆ ಕಿ.ಮೀ 13.60 ಕರ್ನೂರು ಕೋಟಿಗದ್ದೆ ಎಂಬಲ್ಲಿರುವ ಸುಮಾರು 40 ವರ್ಷ ಹಳೆಯ ಸೇತುವೆ ದುರ್ಬಲವಾಗಿದ್ದು ಸದ್ರಿ ರಸ್ತೆಯಲ್ಲಿ ಘನ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದ್ದು ಘನ ವಾಹನಗಳು ಪಲ್ಲತ್ತೂರು-ಕೊಟ್ಯಾಡಿ-ಗಾಳಿಮುಖ ರಸ್ತೆಯಾಗಿ ಸಂಚರಿಸಲು ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದಾರೆ.

LEAVE A REPLY

Please enter your comment!
Please enter your name here