ಸುಳ್ಯಪದವು ಶಬರಿನಗರ ಸ್ವಾಮಿ ಕೊರಗಜ್ಜ ಕ್ಷೇತ್ರದಲ್ಲಿ ಅಗೇಲು ಸೇವೆ

0

ಬಡಗನ್ನೂರು: ಸ್ವಾಮಿ ಕೊರಗಜ್ಜ ಕ್ಷೇತ್ರ ಶಬರಿನಗರ ಸುಳ್ಯಪದವು ಇಲ್ಲಿ ಜು16 ರಂದು  ಸಂಕ್ರಮಣ ಅಂಗವಾಗಿ ಅಗೇಲು ಸೇವೆ  ಹಾಗೂ ಶ್ರೀ ಗುಳಿಗ ದೈವಕ್ಕೆ ಕಳಸ ಸೇವೆ ನಡೆಯಿತು.ಈ ಸಂದರ್ಭದಲ್ಲಿ ಸ್ವಾಮಿ ಕೊರಗಜ್ಜ ಸನ್ನಿಧಿಯಲ್ಲಿ ಸುಮಾರು 118 ಕ್ಕೂ ಮಿಕ್ಕಿ ಅಗೇಲು ಸೇವೆ ಮತ್ತು, ಕಳಸ ಸೇವೆ ಸಲ್ಲಿಸಿ ತಮ್ಮ ತಮ್ಮ ಬೇಡಿಕೆಗಳು ಈಡೇರಿಸುವಂತೆ ಭಕ್ತಾಧಿಗಳು ಪ್ರಾರ್ಥಿಸಿದರು. 

ಈ ಸಂದರ್ಭದಲ್ಲಿ ಸಮಿತಿ ಅಧ್ಯಕ್ಷ ಬೆಳಿಯಪ್ಪ ಗೌಡ ಶಬರಿನಗರ, ಕಾರ್ಯದರ್ಶಿ ಪ್ರಕಾಶ್ ಮರದಮೂಲೆ, ಉಪಾಧ್ಯಕ್ಷ ಸದಾನಂದ ಬೋಳಂಕೂಡ್ಲು, ಕೋಶಾಧಿಕಾರಿ ಭಾಸ್ಕರ ಹೆಗ್ಗಡೆ ಶಬರಿನಗರ, ಪ್ರಧಾನ ಪೂಜಾ ಕರ್ಮಿ ಮಾದವ ಸಾಲಿಯಾನ್ ಹಾಗೂ ಊರ ಭಕ್ತಾದಿಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here