ಗುಂಡ್ಯ: ಗ್ಯಾಸ್ ಟ್ಯಾಂಕರ್, ಕಾರು ಡಿಕ್ಕಿ- ಒರ್ವನಿಗೆ ಗಾಯ

0

ನೆಲ್ಯಾಡಿ: ಗ್ಯಾಸ್ ಟ್ಯಾಂಕರ್ ಹಾಗೂ ಕಾರು ನಡುವೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಪ್ರಯಾಣಿಕರೊಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಗ್ರಾಮದ ಗುಂಡ್ಯ ಸಮೀಪದ ಬರ್ಚಿನ ಹಳ್ಳ ಎಂಬಲ್ಲಿ ಜು.17ರಂದು ಬೆಳಗ್ಗೆ ನಡೆದಿದೆ.


ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಇಂಡಿಯನ್ ಗ್ಯಾಸ್ ಸಾಗಾಟದ ಟ್ಯಾಂಕರ್ ಹಾಗೂ ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಕಾರು ನಡುವೆ ಬರ್ಚಿನಹಳ್ಳದಲ್ಲಿ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಕಾರಿನಲ್ಲಿ ಸುಂದರ್, ಸುಹೇಲ್ ಪಾಷಾ, ಮೇಲುಮನಿ, ಪುಷ್ಪರಾಜ್ ಎಂಬುವರು ಪ್ರಯಾಣಿಸುತ್ತಿದ್ದು ಈ ಪೈಕಿ ಪುಷ್ಪರಾಜ್ ಎಂಬವರಿಗೆ ತೀವ್ರ ಗಾಯವಾಗಿದೆ. ಇವರಿಗೆ ನೆಲ್ಯಾಡಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸ್ಥಳಕ್ಕೆ ನೆಲ್ಯಾಡಿ ಹೊರಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

LEAVE A REPLY

Please enter your comment!
Please enter your name here