ಮುಂದುವರಿದ ಮಳೆ:ಪುತ್ತೂರು,ಕಡಬ ಸಹಿತ 5 ತಾಲೂಕುಗಳ ಅಂಗನವಾಡಿ,ಶಾಲೆ,ಪಿಯು ಕಾಲೇಜಿಗೆ ಜು.19ರಂದೂ ರಜೆ

0

ಪುತ್ತೂರು:ಪುತ್ತೂರು,ಕಡಬ,ಸುಳ್ಯ ಸೇರಿದಂತೆ ದ.ಕ.ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಪುತ್ತೂರು,ಕಡಬ,ಸುಳ್ಯ,ಬಂಟ್ವಾಳ,ಬೆಳ್ತಂಗಡಿ ತಾಲೂಕಿನ ಅಂಗನವಾಡಿಗಳು ಮತ್ತು ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಜು.19ರಂದೂ ರಜೆ ಘೋಷಿಸಲಾಗಿದೆ.ದ.ಕ.ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ಈ ಆದೇಶ ಹೊರಡಿಸಿದ್ದಾರೆ.ಜಿಲ್ಲೆಯ ಮಂಗಳೂರು, ಉಳ್ಳಾಲ, ಮೂಡಬಿದಿರೆ, ಮುಲ್ಕಿ ತಾಲೂಕಿಗೆ ರಜೆ ಇಲ್ಲ ಎಂದು ಜಿಲ್ಲಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here