ಉಪ್ಪಿನಂಗಡಿ: ಧರೆ ಕುಸಿತ- ವಾಹನ ಸಂಚಾರಕ್ಕೆ ತೊಡಕು

0

ಉಪ್ಪಿನಂಗಡಿ: ರಾಷ್ಟ್ರೀಯ ಹೆದ್ದಾರಿ ಬದಿಯ ಧರೆಯೊಂದು ಕುಸಿದು ಮರಗಳು ಹೆದ್ದಾರಿಗಡ್ಡವಾಗಿ ಬಿದ್ದಿದ್ದರಿಂದ ಕೆಲ ಕಾಲ ವಾಹನ ಸಂಚಾರಕ್ಕೆ ತೊಡಕಾದ ಘಟನೆ ಇಲ್ಲಿನ ಬೊಳುವಾರು ಬಳಿ ಗುರುವಾರ ಸಂಭವಿಸಿದೆ.
ಇಲ್ಲಿ ಚತುಷ್ಪಥ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಗಾಗಿ ರಸ್ತೆ ಬದಿಯ ಗುಡ್ಡವನ್ನು ಅಗೆಯಲಾಗಿದ್ದು, ನಿರಂತರ ಮಳೆಯಿಂದಾಗಿ ಮಣ್ಣು ಸಡಿಲಗೊಂಡು ಧರೆ ಕುಸಿದಿದೆ. ಈ ಸಂದರ್ಭ ಇದರ ಮೇಲಿದ್ದ ಮರಗಳು ರಾಷ್ಟ್ರೀಯ ಹೆದ್ದಾರಿಯ ಮೇಲೆ ಬಿದ್ದಿದ್ದು, ಕೆಲ ಹೊತ್ತಿನ ಕಾಲ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ತೊಡಕುಂಟಾಯಿತು. ಬಳಿಕ ಮರಗಳನ್ನು ತೆರವುಗೊಳಿಸಿ, ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.

LEAVE A REPLY

Please enter your comment!
Please enter your name here