ಕಾರ್ಗಿಲ್ ವೀರ ಯೋಧರಿಗೆ ಗಾಂಧೀಕಟ್ಟೆ ಸಮಿತಿ, ದೇಶ ಪ್ರೇಮಿಗಳಿಂದ ಗೌರವಾರ್ಪಣೆ

0

ಪುತ್ತೂರು: ಕಾರ್ಗಿಲ್ ವೀರ ಯೋಧರಾದ ಕ್ಯಾ.ಯೋಗೀಂದ್ರ ಸಿಂಗ್ ಯಾದವ್ ಮತ್ತು ಕ್ಯಾ.ನವೀನ್ ನಾಗಪ್ಪ ಇವರುಗಳನ್ನು ಗಾಂಧೀ ಕಟ್ಟೆ ಸಮಿತಿ ಹಾಗೂ ಪುತ್ತೂರಿನ ದೇಶ ಪ್ರೇಮಿಗಳ ವತಿಯಿಂದ ಜು.19ರಂದು ಗಾಂಧಿ ಕಟ್ಟೆಯ ಬಳಿ ಹಾರಾರ್ಪಣೆ ಮಾಡಿ ಗೌರವಿಸಿದರು.


ಅಂಬಿಕಾ ವಿದ್ಯಾಸಂಸ್ಥೆಗಳು ವತಿಯಿಂದ ನಡೆದ ಕಾರ್ಗಿಲ್ ವಿಜಯೋತ್ಸವದ 25ನೇ ವಾರ್ಷಿಕೋತ್ಸವ ಸಂಭ್ರಮಾಚರಣೆಯ ಕಾರ್ಯಕ್ರಮದ ಅಂಗವಾಗಿ ದರ್ಬೆ ವೃತ್ತದ ಬಳಿಯಿಂದ ಮೆರವಣಿಗೆಯಲ್ಲಿ ಆಗಮಿಸಿದ ಕಾರ್ಗಿಲ್ ವೀರ ಯೋಧರಾದ ಕ್ಯಾ.ಯೋಗೀಂದ್ರ ಸಿಂಗ್ ಯಾದವ್ ಮತ್ತು ಕ್ಯಾ.ನವೀನ್ ನಾಗಪ್ಪ ಇವರುಗಳಿಗೆ ಗಾಂಧಿ ಕಟ್ಟೆಯ ಬಳಿ ಮಾಲಾರ್ಪಣೆ ಮಾಡಿ ಗೌರವಿಸಿದರು.
ಮಾಜಿ ಶಾಸಕಿ ಶಕುಂತಳಾ ಟಿ ಶೆಟ್ಟಿ, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಕೃಷ್ಣಪ್ರಸಾದ್ ಆಳ್ವ, ನಿವೃತ್ತ ಯೋಧ ರಮೇಶ್ ಬಾಬು, ವಕ್ತಾರ ಅಮಳ ರಾಮಚಂದ್ರ, ಮನೋಹರ್ ವೀರ ಯೋಧರಿಬ್ಬರಿಗೆ ಹಾರಾರ್ಪಣೆ ಮಾಡಿ ಗೌರವಿಸಿದರು.

ಕೆಪಿಸಿಸಿ ಸಂಯೋಜಕ ಹೇಮನಾಥ ಶೆಟ್ಟಿ ಕಾವು, ತಾಲೂಕು ಜನಜಾಗೃತಿ ವೇದಿಕೆ ಮಾಜಿ ಅಧ್ಯಕ್ಷ ಮಹಾಬಲ ರೈ ವಳತ್ತಡ್ಕ, ಉದ್ಯಮಿ ಶಿವರಾಮ ಆಳ್ವ, ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀಪ್ರಸಾದ್ ಪಾಣಾಜೆ, ಯಂಗ್ ಬ್ರಿಗೇಡ್ ಅಧ್ಯಕ್ಷ ರಂಜಿತ್ ಬಂಗೇರ, ಬ್ಲಾಕ್ ಕಾಂಗ್ರೆಸ್ ಕಾರ್ಮಿಕ ಘಟಕದ ಅಧ್ಯಕ್ಷ ಶರೂನ್ ಸಿಕ್ವೇರಾ, ಗಿರಿಧರ ಗೌಡ ಸಂಪ್ಯ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here