ಜೆ ಸಿ ಐ ಕೊಕ್ಕಡ ಕಪಿಲಾ ಸಂಸ್ಥೆಯ ವತಿಯಿಂದ ಚಿತ್ತಾರ 2024 ಕಾರ್ಯಕ್ರಮ

0

ಪುತ್ತೂರು: ಜೆ ಸಿ ಐ ಕೊಕ್ಕಡ ಕಪಿಲಾ ಸಂಸ್ಥೆಯ ವತಿಯಿಂದ ಚಿತ್ತಾರ 2024 ಕಾರ್ಯಕ್ರಮವು ಜುಲೈ 20 ರಂದು ಸಂತ ಜಾನರ್ ಹಿರಿಯ ಪ್ರಾಥಮಿಕ ಶಾಲೆ ಕೌಕ್ರಾಡಿ ( ಕೊಕ್ಕಡ ) ಎಂಬಲ್ಲಿ ಜರಗಿತು. ಅಧ್ಯಕ್ಷತೆಯನ್ನು ಸಂತೋಷ್ ಜೈನ್ ವಹಿಸಿದ್ದರು.ಸಂಚಾಲಕ ವಂ. ಫಾ. ಅನಿಲ್ ಪ್ರಕಾಶ್ ಡಿ ಸಿಲ್ವಾ ಉದ್ಘಾಟಿಸಿ ಶುಭ ಹಾರೈಸಿದರು.


ಪುತ್ತೂರಿನ ವರ್ಣಕುಟೀರ ಕಲಾ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥ ಪ್ರವೀಣ್ ವರ್ಣಕುಟೀರ ನೇತೃತ್ವದಲ್ಲಿ ಸುಮಾರು 50 ಮಕ್ಕಳಿಗೆ ಚಿತ್ರಕಲೆ ತರಬೇತಿ ನಡೆಸಲಾಯಿತು. ಗ್ರೀಟಿಂಗ್ಸ್ ತಯಾರಿ, ಮಾರ್ಬಲ್ ಆರ್ಟ್ಸ್, ಪೈಯಿಂಟ್ಸ್ ಕುರಿತು ತರಬೇತಿ ಜೆಸಿ ವತಿಯಿಂದ ಶಿಬಿರವನ್ನು ಆಯೋಜಿಸಲಾಯಿತು. ನಿಕಟ ಪೂರ್ವ ಅಧ್ಯಕ್ಷ ಜಿತೇಶ್ ಎಲ್ ಪಿರೇರ, ಯುವ ಜೆಸಿ ಅಧ್ಯಕ್ಷ ಹರ್ಷಿತ್, ಮಕ್ಕಳ ಜೆಸಿ ಅಧ್ಯಕ್ಷ ವಿವಿಯನ್ ಸುವಾರಿಸ್, ಘಟಕದ ಪೂರ್ವ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು, ಶಾಲಾ ಶಿಕ್ಷಕಿಯರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯದರ್ಶಿ ಅಕ್ಷತ್ ರೈ ವಂದಿಸಿದರು.ಜೋಸೆಫ್ ಪಿರೇರ,ಮುಖ್ಯ ಶಿಕ್ಷಕಿ ಜೆನೆವಿವ್ ಫೆರ್ನಾಂಡಿಸ್,ಅದ್ವಿತ್ ಜೈನ್ ಜೆಸಿ, ಜೆಸಿಂತಾ ಡಿಸೋಜ ಹಾಗೂ ಶೋಭಾ ಪಿ ವಿವಿಧ ಜವಬ್ದಾರಿ ನಿರ್ವಹಿಸಿದರು.

LEAVE A REPLY

Please enter your comment!
Please enter your name here