ಉಪ್ಪಿನಂಗಡಿ: ಬೈಕ್‌ಗಳೆರಡರ ಮುಖಾಮುಖಿ ಢಿಕ್ಕಿ:ಓರ್ವ ಮೃತ್ಯು- ನಾಲ್ವರಿಗೆ ಗಾಯ

0

ಉಪ್ಪಿನಂಗಡಿ: ಬೈಕ್‌ಗಳೆರಡರ ಮಧ್ಯೆ ಢಿಕ್ಕಿ ಸಂಭವಿಸಿ ಬೈಕ್ ಸವಾರನೋರ್ವ ಮೃತಪಟ್ಟು ನಾಲ್ವರು ಗಾಯಗೊಂಡ ಘಟನೆ ಇಲ್ಲಿ ಸಮೀಪದ ತುರ್ಕಳಿಕೆ ಎಂಬಲ್ಲಿ ಜು.20ರ ರಾತ್ರಿ ನಡೆದಿದೆ.


ಬಾರ್ಯ ಪರಿಸರದ ನಿವಾಸಿಗಳಾದ ಶಿವಾನಂದ ಮತ್ತು ಅವರ ಸಹೋದರ ಕಲ್ಲೇರಿಯಿಂದ ಬಾರ್ಯದಲ್ಲಿರುವ ತಮ್ಮ ಮನೆಗೆ ಬೈಕ್‌ನಲ್ಲಿ ಹೋಗುತ್ತಿದ್ದಾಗ ಎದುರುಗಡೆಯಿಂದ ಬಂದ ಕರೀಂ ಅವರು ಚಲಾಯಿಸಿಕೊಂಡು ಬಂದಿದ್ದು, ಈ ಸಂದರ್ಭ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿತ್ತು. ಈ ಪರಿಣಾಮ ಶಿವಾನಂದ ಎಂಬವರು ರಸ್ತೆಗೆಸೆಯಲ್ಪಟ್ಟು, ಗಂಭೀರ ಸ್ವರೂಪದ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ. ಘಟನೆಯಿಂದ ಧನಂಜಯ, ರವಿ, ಆಸ್ಮಾನ್ ಹಾಗೂ ಕರೀಂ ಎಂಬವರೂ ಗಾಯಗೊಂಡಿದ್ದು, ಇವರಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಪುತ್ತೂರು ಹಾಗೂ ಮಂಗಳೂರಿನ ವಿವಿಧ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಪ್ಪಿನಂಗಡಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದರು.

LEAVE A REPLY

Please enter your comment!
Please enter your name here