ವಿವೇಕಾನಂದ ಶಿಶು ಮಂದಿರ 26ನೇ ವರ್ಷದ ಶ್ರೀಕೃಷ್ಣಲೋಕಾ ಸಮಿತಿಗೆ ಆಯ್ಕೆ

0

ಪುತ್ತೂರು: ವಿವೇಕಾನಂದ ಶಿಶು ಮಂದಿರದ ಆವರಣದಲ್ಲಿ ಶ್ರೀಕೃಷ್ಣಜನ್ಮಾಷ್ಠಮಿ ಸಮಿತಿಯಿಂದ ನಡೆಯಲಿರುವ 26ನೇ ವರ್ಷದ ಶ್ರೀಕೃಷ್ಣ ಲೋಕ ಕಾರ್ಯಕ್ರಮದ ಗೌರವಾಧ್ಯಕ್ಷರಾಗಿ ರಾಜಿ ಬಲರಾಮ ಆಚಾರ್ಯ, ಅದ್ಯಕ್ಷರಾಗಿ ಸಂತೋಷ್ ಕುಮಾರ್ ರೈ, ಪ್ರಧಾನ ಕಾರ್ಯದರ್ಶಿಯಾಗಿ ಮೇಘನಾ ಪಾಣಾಜೆ, ಕೋಶಾಧಿಕಾರಿಯಾಗಿ ಕಿಶನ್ ಕುಮಾರ್ ಎಸ್.ಕೆಯವರು ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರಾಗಿ ಚಂದ್ರಶೇಖರ್, ಜೊತೆ ಕಾರ್ಯದರ್ಶಿಯಾಗಿ ರಮ್ಯ ಭಟ್‌ರವರು ಆಯ್ಕೆಯಾಗಿದ್ದಾರೆ. ಪರ್ಲಡ್ಕ ಶಿವಪೇಟೆಯಲ್ಲಿರುವ ವಿವೇಕಾನಂದ ಶಿಶು ಮಂದಿರದಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಶಿಶು ಮಂದಿರದ ಅಧ್ಯಕ್ಷ ರಾಜಗೋಪಾಲ ಭಟ್, ಕಾರ್ಯದರ್ಶಿ ಅಕ್ಷಯ್ ಕುಮಾರ್, ಶ್ರೀಕೃಷ್ಣ ಲೋಕ ಸಮಿತಿ ನಿಕಟಪೂರ್ವ ಅಧ್ಯಕ್ಷ ದಾಮೋದರ ಪಾಟಾಳಿ, ಗೌರವ ಸಲಹೆಗಾರ ಉಪೇಂದ್ರ ಬಲ್ಯಾಯ, ಅಶೋಕ್ ಕುಂಬ್ಳೆ, ವಿವೇಕಾನಂದ ವಿದ್ಯಾವರ್ಧಕ ಸಂಘದ ಶಿವಪ್ರಸಾದ್, ಸಂತೋಷ್ ಬೋನಂತಾಯ, ಡಾ,ಸುಧಾ ಎಸ್.ರಾವ್, ನಿವೃತ್ತ ಶಿಕ್ಷಕಿ ಪ್ರೇಮಲತಾ ಉದಯ್, ಆಡಳಿತ ಮಂಡಳಿ ಸದಸ್ಯರು, ವಿವಿಧ ಕ್ಷೇತ್ರದ ಗಣ್ಯರು, ಶಿಶು ಮಂದಿರದ ಶಿಕ್ಷಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here