ಪೆರಿಯಡ್ಕ: ಯುವತಿ ಸ್ನಾನ ಮಾಡುತ್ತಿದ್ದುದನ್ನು ಕಿಟಕಿಯಿಂದ ನೋಡಲೆತ್ನಿಸಿದ ಆರೋಪಿ ಪೊಲೀಸ್ ವಶ

0

ಉಪ್ಪಿನಂಗಡಿ : ಇಲ್ಲಿನ ಪೆರಿಯಡ್ಕ ಎಂಬಲ್ಲಿ ಯುವತಿಯೋರ್ವರು ಬಚ್ಚಲು ಮನೆಯಲ್ಲಿ ಸ್ನಾನ ಮಾಡುತ್ತಿದ್ದಾಗ ಕಿಟಕಿಯಿಂದ ನೋಡಲೆತ್ನಿಸಿದ ಆರೋಪಿ ಅಬ್ದುಲ್ ರಹಿಮಾನ್ (41 ವ.) ಎಂಬಾತನನ್ನು ಸ್ಥಳೀಯರು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಆದಿತ್ಯವಾರ ರಾತ್ರಿ ನಡೆದಿದೆ. ಆರೋಪಿ ವಿವಾಹಿತನಾಗಿದ್ದು, 16 ಹಾಗೂ 9 ವರ್ಷದ ಇಬ್ಬರು ಮಕ್ಕಳ ತಂದೆಯಾಗಿದ್ದಾರೆ.

ಯುವತಿ ಸ್ನಾನ ಮಾಡುತ್ತಿದ್ದಾಗ ಕಿಟಕಿಯ ಬಾಗಿಲನ್ನು ಸರಿಸಲು ಯತ್ನಿಸಿದ್ದ ವೇಳೆ ಉಂಟಾದ ಶಬ್ದದಿಂದ ಸಂಶಯಗೊಂಡ ಯುವತಿ ತನ್ನ ತಾಯಿಗೆ ಮಾಹಿತಿ ನೀಡಿದರು. ತಾಯಿ ಪರಿಶೀಲಿಸಿದಾಗ ಪರಾರಿಯಾಗುತ್ತಿದ್ದ ಆರೋಪಿ ಅಬ್ದುಲ್ ರಹಿಮಾನ್‌ನನ್ನು ಗುರುತಿಸಿದ್ದರು. ಈ ವೇಳೆ ಸಹಾಯಕ್ಕಾಗಿ ಬೊಬ್ಬೆ ಹೊಡೆದಾಗ ಜಮಾಯಿಸಿದ ಸ್ಥಳೀಯರಿಗೆ ಮಾಹಿತಿ ನೀಡಿ ಆರೋಪಿಯನ್ನು ವಶಕ್ಕೆ ಪಡೆದು ಪೊಲೀಸರಿಗೊಪ್ಪಿಸಿದರು.

ತಾನೇ ಕೃತ್ಯವೆಸಗಿ ರಕ್ಷಿಣೆಗೆ ಧಾವಿಸಿ ಬಂದ : ತಾನು ಕಿಟಕಿಯಿಂದ ವೀಕ್ಷಿಸಲು ಯತ್ನಿಸಿ ಪರಾರಿಯಾಗುತ್ತಿದ್ದ ಕೃತ್ಯವನ್ನು ಯಾರೂ ನೋಡಿಲ್ಲ ಎಂದು ಭಾವಿಸಿ , ಯುವತಿಯ ತಾಯಿ ಬೊಬ್ಬೆ ಹೊಡೆದಾಗ, ತಾನೇ ಮನೆಗೆ ಮೊದಲಾಗಿ ಧಾವಿಸಿ ಬಂದ ಆರೋಪಿ ಏನಾಯಿತ್ತಕ್ಕ . .? ಬಾಗಿಲು ತೆರೆಯಿರಿ ಎಂದು ಸುಭಗನಂತೆ ನಟಿಸಿ ನೆರೆಮನೆಯವರ ಸಂಕಷ್ಠಕ್ಕೆ ಧಾವಿಸಿ ಬಂದವನಂತೆ ವರ್ತಿಸಿದ್ದ ಸ್ಥಳೀಯರು ಆರೋಪಿಯನ್ನು ಹಿಡಿದು ಪೊಲೀಸರಿಗೊಪ್ಪಿಸಿದ್ದಾರೆ.

ಹಿಂದೂ ಸಂಘಟನೆಗಳ ಮುಖಂಡ ಅರುಣ್ ಕುಮಾರ್ ಪುತ್ತಿಲ, ಸ್ಥಳೀಯ ಬಿಜೆಪಿ ಮುಖಂಡರಾದ ಸುರೇಶ್ ಅತ್ರೆಮಜಲು,ಆನಂದ ಕುಂಟಿನಿ, ಸಂತೋಷ್ ಕುಮಾರ್ ಪರಂದಾಜೆ, ಬಜತ್ತೂರು ಗ್ರಾ.ಪಂ.ಅಧ್ಯಕ್ಷ ಗಂಗಾಧರ ಪಿ.ಎನ್.ಸೇರಿದಂತೆ ಹಲವರು ಪೊಲೀಸ್ ಠಾಣೆಗೆ ಭೇಟಿ ನೀಡಿ,ಘಟನೆ ಬಗ್ಗೆ ಮಾಹಿತಿ ಪಡೆದುಕೊಂಡು, ಆರೋಪಿ ವಿರುದ್ಧ ಕಾನೂನು ಕ್ರಮಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

LEAVE A REPLY

Please enter your comment!
Please enter your name here