ಸವಣೂರು ಸ.ಉ.ಹಿ.ಪ್ರಾಥಮಿಕ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

0

ಸವಣೂರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ.ಟ್ರಸ್ಟ್ ಕಡಬ ,ನಿಸರ್ಗ  ಜ್ಞಾನ ವಿಕಾಸ ಮಹಿಳಾ ಕೇಂದ್ರ  ಆರೆಲ್ತಡಿ ,ಕೆ.ವಿ.ಜಿ.ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಸುಳ್ಯ ಇದರ ಆಶ್ರಯದಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕಡಬ ತಾಲೂಕು, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಸವಣೂರು ವಲಯ ,ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ,ಸವಣೂರು ಯುವಕ ಮಂಡಲ,ಸಮರ್ಥ ಜನಸೇವಾ ಟ್ರಸ್ಟ್ ಪುಣ್ಚಪ್ಪಾಡಿ ಇದರ ಸಹಕಾರದೊಂದಿಗೆ ಜು21ರಂದು ಸವಣೂರು ಸರಕಾರಿ ಉನ್ನತೀಕರಿಸಿದ ಹಿ.ಪ್ರಾ.ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ  ನಡೆಯಿತು.

ಶಿಬಿರವನ್ನು ಸುಳ್ಯ ಕೆವಿಜಿ ಆಸ್ಪತ್ರೆಯ  ಹೆರಿಗೆ ಮತ್ತು ಸ್ತ್ರೀ ರೋಗ ತಜ್ಞ ವಿಭಾಗ ಮುಖ್ಯಸ್ಥರಾದ ಪ್ರೋ. ಡಾ. ಗೀತಾ ದೋಪ್ಪಾ ಉದ್ಘಾಟಿಸಿ ಮಾತನಾಡಿ,ಕೆವಿಜಿ ಆಸ್ಪತ್ರೆಯಿಂದ   ಹಾಗೂ ಶಿಬಿರದ ಮೂಲಕ ಸಿಗುವಂತ ಚಿಕಿತ್ಸೆ ಮತ್ತುಸೌಲಭ್ಯಗಳ ಬಗ್ಗೆ ವಿವರಿಸಿದರು.

ಕಡಬ ತಾಲೂಕು ಜನ ಜಾಗೃತಿ ವೇದಿಕೆಯ ಅಧ್ಯಕ್ಷರಾದ  ಮಹೇಶ್ ಕೆ ಸವಣೂರು ಅವರು ಅಧ್ಯಕ್ಷತೆ ವಹಿಸಿದ್ದರು.ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಕಡಬ ತಾಲೂಕಿನ ಯೋಜನಾಧಿಕಾರಿ ಮೇದಪ್ಪ ಗೌಡ ನಾವೂರು,  ಪುಣ್ಚಪ್ಪಾಡಿ ಸಮರ್ಥ ಜನ ಸೇವಾ ಟ್ರಸ್ಟ್ ನ ಅಧ್ಯಕ್ಷರಾದ ಗಿರಿಶಂಕರ್ ಸುಲಾಯ,ಸವಣೂರು ಸ.ಉ.ಹಿ.ಪ್ರಾ. ಶಾಲಾ ಮುಖ್ಯ ಶಿಕ್ಷಕರಾದ ನಿಂಗರಾಜು ವೇದಿಕೆಯಲ್ಲಿ ಉಪಸ್ಥಿತರಿದ್ದು ಸಂದರ್ಭೋಚಿತವಾಗಿ ಮಾತನಾಡಿದರು

ವೇದಿಕೆಯಲ್ಲಿ ಸವಣೂರು ಪ್ರಾ.ಕೃ.ಪ.ಸ.ಸಂಘದ ಉಪಾಧ್ಯಕ್ಷ ಚೇತನ್ ಕೋಡಿಬೈಲು ,ಸವಣೂರು ಉ.ಹಿ.ಪ್ರಾ.ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಸುರೇಶ್ ರೈ ಸೂಡಿಮುಳ್ಳು ,ಶಾಲಾಭಿವೃದ್ದಿ ಸಮಿತಿಯ ಅಧ್ಯಕ್ಷ ಮಹಮ್ಮದ್ ಹನೀಫ್ ,  ಜ್ಞಾನ ವಿಕಾಸ ಕೇಂದ್ರದ ಸಂಯೋಜಕಿ ಸೀತಮ್ಮ ಉಪಸ್ಥಿತರಿದ್ದರು.

ಸವಣೂರು ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ  ತಾರನಾಥ ಕಾಯರ್ಗ  ಸ್ವಾಗತಿಸಿ ,ಸವಣೂರು ಯುವಕ ಮಂಡಲದ ಅಧ್ಯಕ್ಷ ಜಿತಾಕ್ಷ ಜಿ. ವಂದಿಸಿದರು. ಜ್ಞಾನವಿಕಾಸ ಕೇಂದ್ರದ ಸದಸ್ಯೆ ಹೇಮಲತಾ ಪ್ರಾರ್ಥಿಸಿದರು.ಜ್ಞಾನ ವಿಕಾಸ ಸಮನ್ವಯಾಧಿಕಾರಿ ಚೇತನ ಜಿ ಕಾರ್ಯಕ್ರಮ ನಿರೂಪಿಸಿದರು. ಯೋಜನೆಯ ಸವಣೂರು ವಲಯದ ಮೇಲ್ವಿಚಾರಕಿ ವೀಣಾ ಹಾಗೂ ಸೇವಾ ಪ್ರತಿನಿಧಿಗಳಾದ ಪ್ರೇಮಾ, ಕಾವ್ಯಾ,  ಮೀನಾಕ್ಷಿ, ಅಮಿತಾ,ಬೃಂದಾ ಉಪಸ್ಥಿತರಿದ್ದರು.

 ಆರೋಗ್ಯ ತಪಾಸಣೆ
ಆರೋಗ್ಯ ಶಿಬಿರದಲ್ಲಿ ಜನರಲ್ ಮೆಡಿಸಿನ್ ವಿಭಾಗ, ಶಸ್ತ್ರ ಚಿಕಿತ್ಸಾ ವಿಭಾಗ, ಮಕ್ಕಳ ರೋಗ ವಿಭಾಗ, ಇ.ಎನ್.ಟಿ ವಿಭಾಗ, ಚರ್ಮ ಮತ್ತು ಲೈಂಗಿಕ ರೋಗ ವಿಭಾಗ, ಸ್ತ್ರೀ ರೋಗ ವಿಭಾಗ, ಎಲುಬು ಮತ್ತು ಕೀಲು, ಶ್ವಾಸಕೋಶ ಮತ್ತು ತುರ್ತು ಚಿಕಿತ್ಸಾ ವಿಭಾಗದಲ್ಲಿ ತಪಾಸಣೆ ನಡೆಯಿತು.

LEAVE A REPLY

Please enter your comment!
Please enter your name here