ಲಯನ್ಸ್ ಕ್ಲಬ್ ಪುತ್ತೂರು ಪಾಣಾಜೆ-ಅಧ್ಯಕ್ಷರಾಗಿ ದಯಾನಂದ ರೈ ಕೋರ್ಮಂಡ, ಕಾರ್ಯದರ್ಶಿ ನವೀನ್ ಕುಮಾರ್ ರೈ, ಕೋಶಾಧಿಕಾರಿ ಜಲೀಲ್ ಬೈತ್ತಡ್ಕ

0

ಪುತ್ತೂರು: ಲಯನ್ಸ್ ಕ್ಲಬ್ ಪುತ್ತೂರು ಪಾಣಾಜೆಯ ನೂತನ ಪದಾಧಿಕಾರಿಗಳ ಆಯ್ಕೆ ಇತ್ತೀಚೆಗೆ ನಡೆಯಿತು. ನೂತನ ಅಧ್ಯಕ್ಷರಾಗಿ ಬೆಟ್ಟಂಪಾಡಿ ನವೋದಯ ಪ್ರೌಢಶಾಲೆಯ ರಾಜ್ಯ ಪ್ರಶಸ್ತಿ ಪುರಸ್ಕೃತ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ದಯಾನಂದ ರೈ ಕೋರ್ಮಂಡರವರನ್ನು ಆಯ್ಕೆ ಮಾಡಲಾಯಿತು. ಕಾರ್ಯದರ್ಶಿಯಾಗಿ ಬೆಟ್ಟಂಪಾಡಿ ಗ್ರಾ.ಪಂ. ಸದಸ್ಯರಾದ ನವೀನ್ ಕುಮಾರ್ ರೈ ಚೆಲ್ಯಡ್ಕ, ಕೋಶಾಧಿಕಾರಿಯಾಗಿ ಜಲೀಲ್ ಬೈತ್ತಡ್ಕ ಆಯ್ಕೆಯಾದರು.


ಜು. 23 ರಂದು ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಅಶ್ಮಿ ಕಂಫರ್ಟ್ ಸಭಾಂಗಣದಲ್ಲಿ ನಡೆಯಲಿದೆ‌. ನಿಕಟಪೂರ್ವ ಅಧ್ಯಕ್ಷ ಮಹಮ್ಮದ್ ಕುಕ್ಕುವಳ್ಳಿ, ಕಾರ್ಯದರ್ಶಿ ದಯಾನಂದ ರೈ ಹಾಗೂ ಕೋಶಾಧಿಕಾರಿ ಪ್ರಕಾಶ್ ರೈ ಬೈಲಾಡಿಯವರಿಂದ ಪದ ಹಸ್ತಾಂತರ ನಡೆಯಲಿದೆ.

LEAVE A REPLY

Please enter your comment!
Please enter your name here