ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ ಗುರು ಪೂರ್ಣಿಮೆ ಆಚರಣೆ

0

ನರಿಮೊಗರು:ಸಾಂದೀಪನಿ ಗ್ರಾಮೀಣ ವಿದ್ಯಾ ಸಂಸ್ಥೆಯಲ್ಲಿ ಜು.22ರಂದು ಗುರುಪೂರ್ಣಿಮೆಯನ್ನು ಆಚರಿಸಲಾಯಿತು.ಜಗದ್ಗುರು ವೇದವ್ಯಾಸ ಮಹರ್ಷಿಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಗಯ್ಯಲಾಯಿತು.

ಅಧ್ಯಕ್ಷ ಜಯರಾಮ ಕೆದಿಲಾಯ ಶಿಬರ ಮಾತನಾಡಿ ವೇದವ್ಯಾಸರ ಜನ್ಮದಿನವನ್ನು ಗುರುಪೂರ್ಣಿಮ ದಿನವಾಗಿ ಆಚರಿಸುತ್ತೇವೆ. ವೇದವ್ಯಾಸರು ಸಾವಿರಾರು ವರ್ಷಗಳ ಜ್ಞಾನವನ್ನು ದಾಖಲಿಸಿ ವೇದಾಪುರಾಣಗಳ ಮೂಲಕ ಜ್ಞಾನ ವನ್ನು ನೀಡಿದರು. ಎಷ್ಟರವರೆಗೆ ಜ್ಞಾನದ ದಾಹವಿರುತ್ತದೋ ಅಷ್ಟರವರೆಗೆ ನಾವು ಶಿಷ್ಯರಾಗಿರುತ್ತೇವೆ ಪ್ರಕೃತಿ ನಮಗೆ ಗುರುವಾಗಿರುತ್ತದೆ. ಬದುಕಿನುದ್ದಕ್ಕೂ ಇತರರ ಕ್ಷೇಮಕ್ಕೆ ಪ್ರಯತ್ನಿಸಬೇಕು ಎಂದರು.

ಈ ಸಂದರ್ಭದಲ್ಲಿ ಸಂಚಾಲಕ ಭಾಸ್ಕರ್ ಆಚಾರ್ ಹಿಂದಾರ್, ಕಾರ್ಯದರ್ಶಿ ಕೃಷ್ಣ ಪ್ರಸಾದ್ ಕೆದಿಲಾಯ, ಸದಸ್ಯ ಪ್ರಸನ್ನ ಭಟ್,ಶಿಕ್ಷಕ ಶಿಕ್ಷಕೇತರ ವೃoದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಶಾಲಾ ಮುಖ್ಯೋಪಾಧ್ಯಾಯರಾದ ಜಯಮಾಲಾ ವಿಎನ್ ಸ್ವಾಗತಿಸಿ, ಪ್ರಮೀಳಾ ಕಾರ್ಯಕ್ರಮ ನಿರೂಪಿಸಿದರು. ರವಿಶಂಕರ್ ರವರು ವಂದಿಸಿದರು.

LEAVE A REPLY

Please enter your comment!
Please enter your name here