ಪಾಣಾಜೆ: ಮನೆಗೆ ತೆಂಗಿನ ಮರ ಬಿದ್ದು ಹಾನಿ

0

ಪುತ್ತೂರು: ಪಾಣಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಆರ್ಲಪದವು ಎಂಬಲ್ಲಿ ಗಾಳಿ ಮಳೆಯಿಂದ ಎನ್.ಎಸ್ ರಜಾಕ್ ಎಂಬವರ ಮನೆಗೆ ತೆಂಗಿನ ಮರ ಬಿದ್ದು ಹಾನಿಯಾದ ಘಟನೆ ನಡೆದಿದೆ. ಪಾಣಾಜೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಮೈಮೂನತ್ತುಲ್ ಮೆಹ್ರಾ, ಉಪಾಧ್ಯಕ್ಷೆ ಜಯಶ್ರೀ, ಸದಸ್ಯರಾದ ಸುಲೋಚನಾ, ಮೋಹನ ನಾಯ್ಕ ಹಾಗೂ ಅಭಿವೃದ್ಧಿ ಅಧಿಕಾರಿ ಆಶಾ ಹಾಗೂ ಸಿಬ್ಬಂದಿಗಳು ಸ್ಥಳವನ್ನು ಪರಿಶೀಲಿಸಿದರು. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆಯ ಶೌರ್ಯ ವಿಪತ್ತು ನಿರ್ವಹಣಾ ತಂಡದವರು ತೆಂಗಿನ ಮರ ತೆರವುಗೊಳಿಸಿದರು.

LEAVE A REPLY

Please enter your comment!
Please enter your name here